ಕೆರೆ ಏರಿ ಮೇಲೆ ರೌಡಿ ಶೀಟರ್ ಭೀಕರ ಕೊಲೆ

ಶಿವಮೊಗ್ಗ, ಜೂ. 22: ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಬಡಾವಣೆಯ ಕೆರೆ ಏರಿಯ ಮೇಲೆ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಜೂ. 22 ರ ಭಾನುವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದೆ.


ಹಳೇ ಬೊಮ್ಮನಕಟ್ಟೆ ಬಡಾವಣೆ 1 ನೇ ಕ್ರಾಸ್ ನಿವಾಸಿ ಅವಿನಾಶ್ (32) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಈತ ಏಳನೀರು ವ್ಯಾಪಾರ, ಟೈಲ್ಸ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.


ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆಯಿದೆ. ಮುಂಜಾನೆ ಕೆರೆ ಏರಿ ಮೇಲೆ ಸಾರ್ವಜನಿಕರು ಹೋದ ಸಾರ್ವಜನಿಕರು ಕೊಲೆಗೀಡಾದ ಮೃತದೇಹ ಗಮನಿಸಿ ಪೆÇಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ವಿನೋಬನಗರ ಠಾಣೆ ಪೆÇಲೀಸ್ ಅಧಿಕಾರಿ, ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಕಾರಣವೇನು?: ಕೊಲೆಗೀಡಾದ ಅವಿನಾಶ್ ವಿನೋಬನಗರ ಪೆÇಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೆÇಲೀಸರ ತನಿಖೆಯ ನಂತರವಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.