ಕೆ.ಆರ್.ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ಸದಸ್ಯರ ಪದಗ್ರಹಣ

ಸಂಜೆವಾಣಿ ನ್ಯೂಸ್
ಮೈಸೂರು: ಜೂ.30:-
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್. ಎಸ್. ಮಂಜುನಾಥ್‍ಗೌಡ ಅವರು, ಯುವ ಕಾಂಗ್ರೆಸ್‍ನವರು ಭಯ ಬಿಟ್ಟು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಇದರ ಆಧಾರದ ಮೇಲೆ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳಬೇಕು. 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಯುವ ಕಾಂಗ್ರೆಸ್‍ನ ಗುರಿಯಾಗಿದೆ. ಅದಕ್ಕಾಗಿ ಈಗಿನಿಂದಲೇ ಕೆಲಸ ಮಾಡಲಾಗುತ್ತಿದೆ. ಯುವ ಕಾಂಗ್ರೆಸ್ ಸದಸ್ಯರು, ಮುಖಂಡರು, ಯುವಕರು ಮತ್ತು ಮಹಿಳೆಯರನ್ನು ಪಕ್ಷಕ್ಕೆ ಸೇರಿಸುವ ಮೂಲಕ ಸಂಘಟನೆಗೆ ಬಲ ತುಂಬಬೇಕು ಎಂದು ಮನವಿ ಮಾಡಿದರು.


ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎಂ.ಆರ್.ಹೊಯ್ಸಳ ಅಧಿಕಾರ ವಹಿಸಿಕೊಂಡರು. ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ, ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್‍ನ ನಾಗೇಶ್ ಕರಿಯಪ್ಪ, ಎಐಸಿಸಿ ಕಾರ್ಯದರ್ಶಿ ಖೈಷರ್, ಮೈಸೂರು ನಗರ ಅಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕೆ.ಆರ್.ಕ್ಷೇತ್ರದ ಬ್ಲಾಕ್ ಅಧ್ಯಕ್ಷ ಸೋಮಶೇಖರ್, ಮುಖಂಡರಾದ ನವೀನ್ ಕುಮಾರ್, ಪ್ರದೀಪ್‍ಕುಮಾರ್, ಎನ್. ಆರ್.ನಾಗೇಶ್, ಮಾಜಿ ಮಹಾಪೌರ ಟಿ.ಬಿ.ಚಿಕ್ಕಣ್ಣ, ಪ್ರಚಾರ ಸಮಿತಿ ಅಧ್ಯಕ್ಷ ರಘುರಾಜ್, ಕೆಪಿಸಿಸಿ ಸಂಯೋಜಕರು ಶೌಕತ್ ಅಲಿ ಖಾನ್, ನಗರ ಸೇವಾದಳ ಅಧ್ಯಕ್ಷ ಅಶೋಕ್ ಹಾಗೂ ರಹೀಂ ಹಾಜರಿದ್ದರು.