
ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ೨೦೨೬ರ ಏಪ್ರಿಲ್ ೨೯ ರಂದು ಬುಧವಾರ ಸಂಜೆ ಗಂಟೆ ೬.೪೦ ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೪ನೆ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸೋಮವಾರ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.
ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಸುಬ್ರಹ್ಮಣ್ಯಪ್ರಸಾದ್, ಯಶೋಧರ, ಸಂತೋಷ, ಸಂದೀಪ್ ರೈ, ಮಂಜುಳಾ ಉಪಸ್ಥಿತರಿದ್ದರು.
ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿಚ್ಛಿಸುವರು ಏಪ್ರಿಲ್ ೨೫ರೊಳಗೆ ಹೆಸರು ನೋಂದಾಯಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್: ೦೮೨೫೬೨೬೬೪೪, ೯೬೬೩೪೬೪೬೪೮, ೮೧೪೭೨೬೩೪೨೨






























