ಪುಸ್ತಕ ಪ್ರದರ್ಶನ ೨೦೨೫ ಉದ್ಘಾಟನಾ ಸಮಾರಂಭ

ವಿಟ್ಲ ವಿಟ್ಠಲ ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯದ ಸಪ್ತಾಹ ದ ಅಂಗವಾಗಿ ನಾಲ್ಕು ದಿನಗಳ ಪುಸ್ತಕ ಪ್ರದರ್ಶನ ೨೦೨೫ ಉದ್ಘಾಟನಾ ಸಮಾರಂಭ ಶ್ರೀ ರವಿವರ್ಮ ಕೃಷ್ಣರಾಜ ಗ್ರಂಥಾಲಯದಲ್ಲಿ ನಡೆಯಿತು. ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಮ ಕೆ ಉದ್ಘಾಟಿಸಿದರು. ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ಎಂ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರಾದ ರವಿಪ್ರಕಾಶ್, ನಿತ್ಯಾನಂದ ನಾಯಕ್ ಮತ್ತು ಸದಾಶಿವ ಬನ, ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ಆಡಳಿತ ಅಧಿಕಾರಿ ಪ್ರಶಾಂತ ಚೊಕ್ಕಾಡಿ, ಎಲ್ಲಾ ಉಪನ್ಯಾಸಕರು, ಗ್ರಂಥ ಪಾಲಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.