ಬಿ.ಪಿ.ಎಸ್.ಸಿ.ಯಲ್ಲಿಅಗ್ನಿ ಅವಘಡದ ಅಣಕು ಪ್ರದರ್ಶನ


ಸಂಜೆವಾಣಿ ವಾರ್ತೆ
ಬಳ್ಳಾರಿ, ಅ.30:
ನಗರದ ಡಾ||ರಾಜ್‍ಕುಮಾರ್ ರಸ್ತೆಯಲ್ಲಿರುವ ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್ ಅ್ಯಂಡ್ ಕಾಲೇಜ್‍ನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯವರು  ಶಾಲೆಯಲ್ಲಿ ಅಗ್ನಿ ಅವಘಡ ಉಂಟಾದಾಗ ಅದನ್ನು ಯಾವ ರೀತಿ ಸರಿಪಡಿಸಬೇಕು ಎನ್ನುವುದನ್ನು ವಿಧ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಅಣುಕು ಪ್ರದರ್ಶನದ ಮೂಲಕ ತಿಳಿಸುತ್ತಾ, ಅವಘಡದಂತಹ ಸಂಧರ್ಭದಲ್ಲಿ ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವುದನ್ನು ಅರ್ಥಪೂರ್ಣವಾಗಿ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ, ಕರ್ನಾಟಕ ರಾಜ್ಯದ ಉಪಾಧ್ಯಕ್ಷರಾದ ಭಾಸ್ಕರ್ ರಾವ್ ಆಗಮಿಸಿದ್ದರು. ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತ ರೆಡ್ ಕ್ರಾಸ್ ಸಂಸ್ಥೆಯು ಯಾವುದೇ ಜಾತಿ ಧರ್ಮದ ಹಂಗು ಇಲ್ಲದೇ ಮಾನವೀಯತೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳುತ್ತಾ, ವಿಧ್ಯಾರ್ಥಿಗಳಿಗೆ ನಾಯಿ ಕಡಿತ ಹಾಗೂ ಪಿಟ್ಸ್‍ನಂತಹ ಸಂದರ್ಭದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂದು ವಿಧ್ಯಾರ್ಥಿಗಳಿಗೆ ತಿಳಿಸಿ, ತಾವೆಲ್ಲರೂ ಉತ್ತಮ ನಾಯಕರಾಗಬೇಕು ಎಂದು ಹೇಳಿದರು. ನಂತರ ಅಣುಕು ಪ್ರದರ್ಶನ ನೀಡಿದ ರೆಡ್ ಕ್ರಾಸ್ ಸಂಸ್ಥೆಯ ಸೇವಾ ನಿರತರಿಗೆ ಅಭಿನಂದನಾ ಪತ್ರವನ್ನು ವಿತರಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಪಿಎಸ್‍ಸಿ ಶಾಲೆಯ ಅಧ್ಯಕ್ಷರಾದ    ಡಾ|| ಎಸ್.ಜೆ.ವಿ.ಮಹಿಪಾಲ್ ರವರು, ಬಿಪಿಎಸ್‍ಸಿ ಶಾಲೆಯ ಪ್ರಾಂಶುಪಾಲರಾದ ಜೆ.ಅನೀಲ್ ಕುಮಾರ್‍ರವರು,     ಶ್ರೀ ಶಕೀಬ್ ಕಾರ್ಯದರ್ಶಿ ಐ.ಆರ್.ಸಿ ಹಾಗೂ ಶಾಲಾ ಶಿಕ್ಷಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.