ಭಾರತ-ಪಾಕ್ ಸಂಘರ್ಷ ದೈವಿಕ ಅನುಗ್ರಹ

ಇಸ್ಲಾಮಾಬಾದ್, ಡಿ.22: – ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ದಾಳಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ನಾಲ್ಕು ದಿನಗಳ ತೀವ್ರ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನವು ‘ದೈವಿಕ ಹಸ್ತಕ್ಷೇಪ’ ಪಡೆದಿದೆ ಎಂದು ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಇಸ್ಲಾಮಾಬಾದ್ ನಲ್ಲಿ ನಡೆದ ರಾಷ್ಟ್ರೀಯ ಉಲೇಮಾ ಸಮ್ಮೇಳನದಲ್ಲಿ ಮಾತನಾಡಿದ ವೇಳೆ ಮುನೀರ್ ಈ ಹೇಳಿಕೆ ನೀಡಿದ್ದಾರೆ.


“ನಾವು ಅಲ್ಲಾಹನ ಹಸ್ತಕ್ಷೇಪವನ್ನು ಅನುಭವಿಸಬಹುದು. ಅದು ಸಂಭವಿಸಿತ್ತು” ಎಂದು ಮುನೀರ್ ಉರ್ದುವಿನಲ್ಲಿ ಹೇಳಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅವರು ತಮ್ಮ ಭಾಷಣದಲ್ಲಿ ಕುರಾನ್ ನ ಹಲವಾರು ಶ್ಲೋಕಗಳನ್ನು ಪಠಿಸಿದ್ದಾರೆ.


ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಮೇ 7ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಇದು 26 ಜನರನ್ನು ಬಲಿ ತೆಗೆದುಕೊಂಡಿತು. ಇದರಲ್ಲಿ ಹೆಚ್ಚಿನವರು ಪ್ರವಾಸಿಗರು ಸಾವನ್ನಪ್ಪಿದ್ದರು. ಈ ಕಾರ್ಯಾಚರಣೆಯಡಿಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಹಲವಾರು ಭಯೋತ್ಪಾದಕ ಲಾಂಚ್ ಪ್ಯಾಡ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು.


ಇದಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನವು ಭಾರತದ ಮಿಲಿಟರಿ ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಉಭಯ ದೇಶಗಳ ನಡುವೆ ತೀವ್ರ ಮಿಲಿಟರಿ ಸಂಘರ್ಷಕ್ಕೆ ಕಾರಣವಾಯಿತು. ಮೇ 10ರಂದು, ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ತಮ್ಮ ಭಾರತೀಯ ಸಹವರ್ತಿಗೆ ಕರೆ ಮಾಡಿ ಕದನ ವಿರಾಮಕ್ಕೆ ಮನವಿ ಮಾಡಿದ್ದರು.
ಎಲ್ಲಾ ಹಗೆತನವನ್ನು ನಿಲ್ಲಿಸಿದರೂ, ರಕ್ಷಣಾ ಸಚಿವರು, ಸೇನಾ ಮುಖ್ಯಸ್ಥ ಮತ್ತು ನೌಕಾಪಡೆಯ ಮುಖ್ಯಸ್ಥರು ಸೇರಿದಂತೆ ಭಾರತೀಯ ಮಂತ್ರಿಗಳು ಮತ್ತು ಉನ್ನತ ಮಿಲಿಟರಿ ಅಧಿಕಾರಿಗಳು ಆಪರೇಷನ್ ಸಿಂಧೂರ್ ಒಂದು ನಡೆಯುತ್ತಿರುವ ವ್ಯಾಯಾಮವಾಗಿದೆ ಮತ್ತು ಈ ಪ್ರದೇಶದ ಭೌಗೋಳಿಕತೆಯಲ್ಲಿ ಬದಲಾವಣೆಗೆ ಕಾರಣವಾಗುವ ಯಾವುದೇ ದುಸ್ಸಾಹಸವನ್ನು ಪ್ರಯತ್ನಿಸಿದರೆ ಅದನ್ನು ಮತ್ತೆ ಪ್ರಾರಂಭಿಸಬಹುದು ಎಂದು ಪಾಕಿಸ್ತಾನಕ್ಕೆ ಆಗಾಗ್ಗೆ ಎಚ್ಚರಿಕೆ ನೀಡಿದ್ದಾರೆ.


ಭಾರತೀಯ ಸಶಸ್ತ್ರ ಪಡೆಗಳು ಪಶ್ಚಿಮ ಗಡಿಯಲ್ಲಿ ಹೆಚ್ಚಿನ ಎಚ್ಚರಿಕೆಯಲ್ಲಿದ್ದು, ಪಾಕಿಸ್ತಾನದ ಪ್ರತಿಯೊಂದು ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುತ್ತಿವೆ.