
ಉಡುಪಿ: ಮೇ ೩೧ ರಂದು ಕುರ್ಕಾಲು ಗ್ರಾಮದ ಶಂಕರಪುರದ ಅಶ್ವತಕಟ್ಟೆ ಬಸ್ ನಿಲ್ದಾಣದ ಬಳಿ ಮಟ್ಕಾ ಚೀಟಿ ಬರೆಯುತ್ತಿದ್ದ ವಿಠಲ ದೇವಾಡಿಗ ಎಂಬಾತನನ್ನು ಬಂಧಿಸಿದ್ದು, ಆತನ ವಶದಲ್ಲಿ ಮಟ್ಕಾ ಸಂಖ್ಯೆ ಬರೆದಿರುವ ಚೀಟಿ ? ೧, ನಗದು ಹಣ ರೂಪಾಯಿ ೧,೨೦೦/- ಮತ್ತು ಬಾಲ್ ಪೆನ್ -೧ನ್ನು ಜಪ್ತಿ ಮಾಡಲಾಗಿರುತ್ತದೆ. ಮಟ್ಕಾ ಚೀಟಿ ನೀಡುವ ಬಗ್ಗೆ ವಿಚಾರಿಸಲಾಗಿ ಜೂಜಾಟದ ಬುಕ್ಕಿ ಉಡುಪಿಯ ಲಿಯೋ ಕರ್ನೆಲಿಯೋ ತಿಳಿಸಿದಂತೆ, ನಾನು ಮಟ್ಕಾ ಜುಗಾರಿ ಹಣ ಸಾರ್ವಜನಿಕರಿಂದ ಕಾನೂನು ಬಾಹಿರವಾಗಿ ಸಂಗ್ರಹಿಸುತ್ತಿರುವುದಾಗಿ ಒಪ್ಪಿಕೊಂಡಿರುತ್ತಾನೆ. ವಿಠಲ ದೇವಾಡಿಗ ಮತ್ತು ಲಿಯೋ ಕರ್ನೇಲಿಯೋ ಇವರುಗಳು ಸಂಘಟಿತರಾಗಿ ಕಾನೂನು ಬಾಹಿರವಾಗಿ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡಿ ಅವರಿಂದ ಹಣ ಸಂಗ್ರಹ ಮಾಡುತ್ತಿದ್ದು, ಇವರುಗಳ ವಿರುದ್ದ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ.
ಮೊದಲ ಆರೋಪಿ ವಿಠಲ ದೇವಾಡಿಗ ವಿರುದ್ಧ ಈಗಾಗಲೇ ೧೨ ಪ್ರಕರಣಗಳು ದಾಖಲಾಗಿರುತ್ತದೆ.
ಎರಡನೇ ಆರೋಪಿಯಾದ ಲಿಯೋ ಕರ್ನೇಲಿಯೋ ವಿರುದ್ಧ ಈಗಾಗಲೇ ಸುಮಾರು ೩೪ ಪ್ರಕರಣಗಳು ದಾಖಲಾಗಿರುತ್ತದೆ.
ಇಬ್ಬರು ಆರೋಪಿಗಳನ್ನು ರಸ್ತಗಿರಿ ಮಾಡಲಾಗಿದ್ದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.