ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಜೂ. 27 :– ಪಟ್ಟಣದಲ್ಲಿ ಇತ್ತೀಚಿಗೆ ಅಪಘಾತದಿಂದ ಮೃತಪಟ್ಟ ವ್ಯಕ್ತಿಯ ಪತ್ನಿಗೆ ವಿಧವಾ ವೇತನ ಹಾಗೂ ರಾಷ್ಟ್ರೀಯ ಭದ್ರತಾ ಯೋಜನೆಯ ಮಂಜೂರಾತಿ ಆದೇಶ ಪತ್ರವನ್ನು ಕೂಡ್ಲಿಗಿ ತಹಸೀಲ್ದಾರ್ ವಿ ಕೆ ನೇತ್ರಾವತಿ ಫಲಾನುಭವಿ ಮನೆಗೆ ಭೇಟಿ ನೀಡಿ ವಿತರಿಸಿ ಆ ಮಹಿಳೆಗೆ ಆತ್ಮಸ್ಥೈರ್ಯ ತುಂಬಿ ಸಾಂತ್ವನ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಸೂಚನೆಯ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ ಅಭಿಯಾನ ಮಾದರಿಯಲ್ಲಿ ಕೂಡ್ಲಿಗಿ ತಹಸೀಲ್ದಾರ್ ವಿ ಕೆ ನೇತ್ರಾವತಿ ಅವರು ಪಟ್ಟಣದಲ್ಲಿ ಇದೇ ತಿಂಗಳ 5ನೇ ತಾರೀಖಿನಂದು ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ ಜಿ ಜಗದೀಶ್ ಅವರ ಮನೆಗೆ ತೆರಳಿ ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸಿ ಮೃತರ ಪತ್ನಿ ಗುರಿಕಾರ ಸುನಿತಾ ಅವರಿಗೆ ವಿಧವಾ ವೇತನ ಹಾಗೂ ರಾಷ್ಟ್ರೀಯ ಭದ್ರತಾ ಯೋಜನೆ ಮಂಜೂರಾತಿ ಆದೇಶ ಪ್ರತಿಯನ್ನು ವಿತರಣೆ ಮಾಡಿ, ಮೃತರ ಕುಟುಂಬಕ್ಕೆ ಆತ್ಮಸ್ಥೈರ್ಯ ಹಾಗೂ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕೂಡ್ಲಿಗಿ ಹೋಬಳಿ ಕಂದಾಯ ನಿರೀಕ್ಷಿಕ ಹಾಗೂ ಗ್ರಾಮ ಆಡಳಿತ ಅಧಿಕಾರಿ ಪ್ರಭು ತಳವಾರ್ ಮತ್ತು ಮೃತ ಜಗದೀಶ ಅವರ ಕುಟುಂಬ ದವರು ಇದ್ದರು.