
ಮಂಗಳೂರು-ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು. ಅವರು ಬುಧವಾರ ಪತ್ರಿಕಾಭವನದಲ್ಲಿದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಡಳಿತ ವ್ಯವಸ್ಥೆ ಹಾಗೂ ಮಾಧ್ಯಮ ಒಂದೇ ಹಾದಿಯಲ್ಲಿ ಸಾಗುತ್ತಿದ್ದು, ಇದು ಅರೋಗ್ಯಕರ ಬೆಳವಣಿಗೆ. ಒಂದೇ ಘಟನೆಯನ್ನು ಹಲವು ರೀತಿಯಲ್ಲ ವೈಭವೀಕರಣ ಮಾಡಲಾ ಗಿರುವ ಸುದ್ದಿಗಳನ್ನು ನಾನು ಹಿಂದೆ ಗಮನಿಸಿದ್ದೆ ಆದರೆ ಇಂದು ಫ್ಯಾಕ್ಟ್ ಚೆಕ್ ಮಾದರಿಯಲ್ಲಿ ಸುದ್ದಿಗಳನ್ನು ಪ್ರಕಟಿಸ ಲಾಗುತ್ತಿದೆ. ಇದು ಸಂತಸದ ವಿಚಾರ. ಪತ್ರಕರ್ತರು ನೈಜ ಸುದ್ದಿಗಳನ್ನು ನೈಜವಾಗಿ ನೀಡಬೇಕು. ಸಮಾಜದಲ್ಲಿ ವಸ್ತು ನಿಷ್ಠ ರಾಗಿ ಕಾರ್ಯ ನಿರ್ವ ಹಿಸ ಬೇಕಾಗುತ್ತದೆ ಎಂದರು. ಪತ್ರಕರ್ತರು ಪಾರದರ್ಶಕ ವರದಿ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ನೆರವಾಗಬೇಕು. ಸಮಾಜದಲ್ಲಿ ಬದಲಾವಣೆ ಎನ್ನುವುದು ಏಕಾಏಕಿ ಆಗಲು ಸಾಧ್ಯವಿಲ್ಲ. ಕಮ್ಯೂನಲ್ ಫೀಲಿಂಗ್ ಎನ್ನುವುದು ನಿರಂತರ ವಾಗಿರುತ್ತದೆ. ಅಂತಹ ಭಾವನೆಯನ್ನು ನಿಧಾನವಾಗಿ ಬದಲಾಗಬೇಕು. ಅದು ಪತ್ರಕರ್ತ ರಿಂದ ಮಾತ್ರ ಸಾಧ್ಯ. ಎಲ್ಲವೂ ಶಾಂತಿಯುತ ವಾಗಿದ್ದಾಗ ಏಕಾಏಕಿ ಸಣ್ಣಪುಟ್ಟ ಘಟನೆಗಳು ನಡೆದರೆ ಅಂತಹ ಸಂದರ್ಭದಲ್ಲಿ ಪಾರದರ್ಶಕ ವರದಿಗಾರಿಕೆ ಅಗತ್ಯವಾಗಿದೆ. ಅಪರಾಧಗಳು ನಡೆದಾಗ ವ್ಯಾಪಾರ ವ್ಯವಹಾರ, ರಾಜಕೀಯ ಸಹಿತ ವಿವಿಧ ಕ್ಷೇತ್ರಗಳಿಗೆ ಪರಿಣಾಮ ಬೀರುವ ಮೂಲಕ ಹೊಸ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. ಅಪರಾಧ ಮಾಡುವವರು ಎಷ್ಟೇ ಚಾಲಾಕಿಗಳಾಗಿದ್ದರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಾಡಿನ ಶಾಂತಿಗಾಗಿ ಎಲ್ಲರೂ ಸಹಕರಿಸುವ ಜತೆಗೆ ಶ್ರಮಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಅರಣ್ಯ ಸಂರಕ್ಷಣಾಕಾರಿ ಡಾ.ವಿ.ಕರಿಕಾಲನ್ ಮಾತನಾಡುತ್ತಾ ಪತ್ರಕರ್ತರು ಸಮಾಜವನ್ನು ಎಚ್ಚರಿಸುವ ಕೆಲಸವನ್ನು ಮಾಡುತ್ತಿರು ವುದನ್ನು ನಾನು ಗಮನಿಸಿದ್ದೇನೆ. ಇದರೊಂದಿಗೆ ಪ್ರಜಾಪ್ರಭುತ್ವದ ವ್ಯವಸ್ಥೆ ಬಲಗೊಳಿಸಲು ಸಹಕಾರ ನೀಡುತ್ತಿದ್ದಾರೆ ಎಂದರು.
ಕರಾವಳಿಯ ಜನ ಸುಶಿಕ್ಷಿತರಾಗಿದ್ದು, ಇಂತಹ ಶಿಕ್ಷಣ ವ್ಯವಸ್ಥೆ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ. ಉತ್ತಮ ಶಿಕ್ಷಣ ಪಡೆ ದರೂ, ಲೋಕಸೇವಾ ಆಯೋಗದ ಮೂಲಕ ಜನ ಸೇವೆಗೆ ಮುಂದಾಗುವವರು ವಿರಳ. ಅದರ ಬದಲಾಗಿ ಉದ್ಯಮ ದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದು ಸಾರ್ವಜನಿಕ ಸೇವೆಗೆ ಉತ್ತಮ ಅವಕಾಶಗಳಿವೆ. ಅವುಗಳನ್ನು ಕರಾವಳಿಯ ಯುವ ಸಮುದಾಯ ಬಳಸಿಕೊಳ್ಳಬೇಕು ಎಂದರು.
ಪತ್ರಿಕಾ ದಿನದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ನ್ಯೂಸ್-೧೮ನ ಪ್ರಧಾನ ಸಂಪಾದಕ ಹರಿಪ್ರಸಾದ್ ಅಪ್ಪಂಗಾಯ ಅವರು, ಮಾಧ್ಯಮ ಇಂದು ಹೆಚ್ಚು ಟೀಕೆಗೆ ಒಳಗಾಗಿದೆ. ಸುಳ್ಳು ಸುದ್ದಿ ಪ್ರಸಾರ ವಾಗುತ್ತಿದೆ ಎನ್ನುವ ಆರೋಪ ಗಳಿದ್ದು ಸುಳ್ಳು ಸುದ್ದಿ ತಡೆಯಲು ಪತ್ರಕರ್ತರ ಜವಾಬ್ದಾರಿ ಪ್ರಮುಖವಾಗಿದೆ. ಗಾಸಿಪ್ ತಡೆಯುವುದು ನಮ್ಮ ಎದುರು ಇರುವ ದೊಡ್ಡ ಸವಾಲು. ಡಿಜಿಟಲ್ ಮತ್ತು ಸೋಷಿಯಲ್ ಮೀಡಿಯಾದಿಂದ ಸುಳ್ಳು ಸುದ್ದಿ ಹರಡುತ್ತಿದೆ. ಜಾತಿ, ಧರ್ಮ ವೈಭವೀಕರಿಸದೆ ಅವುಗಳನ್ನು ಪತ್ರಕರ್ತರು ದೂರವಿರಿಸಬೇಕು. ಧರ್ಮವನ್ನು ಆಧಾರವಾಗಿರಿಸಿ ಬರೆಯಬಾರದು. ಒಂದು ಧರ್ಮದ ಪರ ಮತ್ತೊಂದು ಧರ್ಮದ ವಿರುದ್ಧ ಬರೆಯಬಾರದು. ಪತ್ರಕರ್ತರು ಭ್ರಷ್ಟರಾಗಿ ರದೆ, ಪಾರದರ್ಶಕ ವರದಿಗಾರಿಕೆಗೆ ಆಧ್ಯತೆ ನೀಡಬೇಕು. ಪತ್ರಿಕೋಧ್ಯಮ ಸಮಾಜದ ಕನ್ನಡಿಯಾಗಿದ್ದು, ಪತ್ರಕರ್ತರು ಅದನ್ನು ಕಾಲಕಾಲಕ್ಕೆ ಸ್ವಚ್ಛಗೊಳಿ ಸುತ್ತಿರಬೇಕು ಎಂದರು.೧೮೪೩ರ ಜುಲೈ ೧ರಂದು ಕ್ರೈಸ್ತ ಮಿಷನರಿ ಯಾಗಿದ್ದರೆವರೆಂಡ್ ಹರ್ಮನ್ ಮೊಗ್ಲಿಂಗ್ ಅವರು ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭಿಸಿದ್ದರು. ಈ ಐತಿಹಾಸಿಕ ದಿನ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗ ವಾಸ್ತವ ಸಂಗತಿಗಳನ್ನು ಸಮಾಜದ ಮುಂದಿಟ್ಟು ಪ್ರಜಾಪ್ರಭುತ್ವವನ್ನು ಸಶಕ್ತ ಗೊಳಿಸಬೇಕಾಗಿದೆ.ಸತ್ಯ ಸಂಗತಿ ಗಳನ್ನುಜನರ ಮುಂದಿಡಬೇಕಾಗುತ್ತದೆ ತಪ್ಪುಗಳು ನುಸುಳದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದರು.
































