ಸಾಣೂರು: ಗ್ಯಾಸ್ ಸಿಲಿಂಡರ್ ಸ್ಪೋಟ-ಮನೆಗೆ ಹಾನಿ

ಕಾರ್ಕಳ-ಸಾಣೂರು ಗ್ರಾಮದ ಮುದ್ದಣ್ಣ ನಗರದಲ್ಲಿ ವಾರಿಜಾ ಕೋಂ ಕೃಷ್ಣ ಶೆಟ್ಟಿಗಾರ ಎಂಬುವರ ಮನೆಯಲ್ಲಿ ಶುಕ್ರವಾರ ರಾತ್ರಿ ಸುಮಾರು ೧.೩೦ರ ವೇಳೆಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಸ್ಪೋಟದ ಪರಿಣಾಮ ಮನೆಯ ಗೋಡೆಗಳು ಹಾಗೂ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ.


ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮನೆಯೊಳಗಿನ ಸೊತ್ತುಗಳಿಗೆ ಹಾನಿಯಾಗಿದ್ದು, ಅಂದಾಜು ರೂ. ೨,೦೦,೦೦೦ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ಪಡೆದ ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ಯಾಸ್ ಲೀಕ್ ಕಾರಣವಾಗಿ ಸ್ಪೋಟ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.