೩೬ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ನ ೨೯ ಕ್ರೀಡಾಪಟುಗಳು ಆಯ್ಕೆ

ಮೂಡುಬಿದಿರೆ- ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಆಂಧ್ರಪ್ರದೇಶದ ಗುಂಟೂರುನಲ್ಲಿ ಸೆ.೨೩ರಿಂದ ೨೫ರವರೆಗೆ ನಡೆಯುವ ೩೬ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ೨೯ ಮಂದಿ ಕ್ರೀಡಾಪಟುಗಳು ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಒಂದೇ ಸಂಸ್ಥೆಯಿಂದ ೨೯ ಕ್ರೀಡಾಪಟುಗಳು ಸ್ಪರ್ಧೆಗೆ ಅವಕಾಶ ಪಡೆದಿರುವುದು ಗಮನಾರ್ಹ ಸಾಧನೆ. ೧೦ ಮಂದಿ ಬಾಲಕಿಯರು ಹಾಗೂ ೧೯ ಮಂದಿ ಬಾಲಕರು ವಿವಿಧ ವಿಭಾಗಗಳಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ.
ಬಾಲಕಿಯರ ವಿಭಾಗ: ಐಶ್ವರ್ಯ (ಚಕ್ರ ಎಸೆತ, ಗುಂಡು ಎಸೆತ), ಗೀತಾ (೪೦೦ ಮೀ., ೪೪೦೦ ರಿಲೇ), ನಾಗಿನಿ (೧೦೦೦ ಮೀ.), ಚರಿಶ್ಮಾ (೧೦೦೦ ಮೀ.), ವೈಷ್ಣವಿ (ಉದ್ದ ಜಿಗಿತ), ಭಾಗೀರಥಿ (೩ ಕಿ.ಮೀ ನಡಿಗೆ), ನಂದಾ (ಜಾವಲಿನ್ ಎಸೆತ), ಪ್ರೇಕ್ಷಿತಾ (ಜಾವಲಿನ್ ಎಸೆತ), ಮೇಘಾ (ತ್ರ್ರಂಯಥ್ಲಾನ್ ಸಿ), ಸುಜಾತ ವೈ (ತ್ರಯಥ್ಲಾನ್ ಸಿ). ಬಾಲಕರ ವಿಭಾಗ: ನೋಯಿಲ್ (ಉದ್ದ ಜಿಗಿತ), ಮಹಮ್ಮದ್ ತಬ್ಶೀರ್ (ತ್ರಿವಿಧ ಜಿಗಿತ), ಗುರು (ಹೆಪ್ಟಾಥ್ಲಾನ್), ಯಶವಂತ (೮೦೦ ಮೀ., ೪೪೦೦ ರಿಲೇ), ದಯಾನಂದ (೪೦೦ ಮೀ., ೪೪೦೦ ರಿಲೇ), ದರ್ಶನ (೫ ಕಿ.ಮೀ ನಡಿಗೆ), ರಾಮು (೪೦೦ ಮೀ., ೪೪೦೦ ರಿಲೇ), ಸರ್ವಜಿತ್ (೪*೧೦೦ ರಿಲೇ), ಅಬ್ದುಲ್ ರಜಾಕ್ (ಹ್ಯಾಮರ್ ಎಸೆತ), ಕೇಶವ ನಾಯ್ಕ (ಜಾವಲಿನ್ ಎಸೆತ), ಮನಿಷ್ (ಉದ್ದ ಜಿಗಿತ), ಡೈನ್ದೇವ್ (೮೦೦ ಮೀ. ಹರ್ಡಲ್ಸ್), ಲೋಹಿತ್ ಗೌಡ (ಉದ್ದ ಜಿಗಿತ), ನವೀನ್ (ಉದ್ದ ಜಿಗಿತ), ಕೃಷ್ಣ ಪ್ರಕಾಶ (ಜಾವಲಿನ್ ಎಸೆತ), ಮೈಲಾರಿ (ಜಾವಲಿನ್ ಎಸೆತ), ಪ್ರಣವ್ (ತ್ರಯಥ್ಲಾನ್ ಎ), ಆದರ್ಶ್ (ತ್ರಯಥ್ಲಾನ್ ಬಿ), ಸುಭಾಶ್ (ತ್ರಯಥ್ಲಾನ್ ಸಿ).
ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.