
ಸಂಜೆವಾಣಿ ವಾರ್ತೆ
ಹನೂರು: ಜೂ.20:- ಅಕ್ರಮವಾಗಿ ಮಾರಾಟ ಮಾಡಲು ಒಣಗಾಂಜ ಸಾಗಿಸುತ್ತಿದ್ದ ಇಬ್ಬರೂ ವ್ಯಕ್ತಿಗಳನ್ನು ಹನೂರು ತಾಲೂಕಿನ ವಡಕೆಹಳ್ಳ ಗ್ರಾಮದ ಹತ್ತಿರ ಬಂಧಿಸುವಲ್ಲಿ ರಾಮಾಪುರ ಪೆÇಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಲೋಕೇಶ್ ನೇತೃತ್ವದ ತಂಡ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಜೆ.ಪಿ ನಗರದ ಮಹೇಶ್ ಮತ್ತು ಕಾರ್ತಿಕ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಂಗಳೂರು ಮೂಲದ ಮಹೇಶ್ ಮತ್ತು ಕಾರ್ತಿಕ್ ಇಬ್ಬರು ವ್ಯಕ್ತಿಗಳು ಬಸ್ಸಿನಲ್ಲಿ ಬಂದಿಳಿದು ಅಕ್ರಮವಾಗಿ 297 ಗ್ರಾಂ. ಒಣಗಾಂಜಾ ತಂದು ಮಾರಾಟ ಮಾಡಲು ಸಾಗಿಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ವಡಕೆಹಳ್ಳ ಗ್ರಾಮದ ಹತ್ತಿರ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ದಾಳಿ ಮಾಡಿ ಇಬ್ಬರನ್ನೂ ಬಂಧಿಸಿದ್ದಾರೆ.
ಬಂಧಿತರಿಂದ 297 ಗ್ರಾಂ ಒಣಗಾಂಜಾ ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ರಾಮಾಪುರ ಪೆÇಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಲೋಕೇಶ್, ಸಿಬ್ಬಂದಿಗಳಾದ ಲಿಯಾಖಾತ್ ಅಲಿಖಾನ್, ರಾಜು, ರಾಮು ಇತರರು ಇದ್ದರು.