ಅಟ್ಟುಗೂಳಿಪುರ ಗ್ರಾ.ಪಂ. ಉಪಾಧ್ಯಕ್ಷರಾಗಿ ಪ್ರಶಾಂತ್ ಅವಿರೋಧ ಆಯ್ಕೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ.17:
– ತಾಲೂಕಿನ ಅಟ್ಟುಗೂಳಿಪುರ ಗ್ರಾ.ಪಂ.ನೂತನ ಉಪಾಧ್ಯಕ್ಷ ರಾಗಿ ಕಾಂಗ್ರೆಸ್ ಬೆಂಬಲಿತ ಪ್ರಶಾಂತ್ ಅವಿರೋಧವಾಗಿ ಆಯ್ಕೆಯಾದರು.


ಗ್ರಾ.ಪಂ. ಉಪಾಧ್ಯಕ್ಷರಾಗಿದ್ದ ಸೋಮಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಜಿಲ್ಲಾ ನಗರಾಭಿವೃದ್ದಿ ಕೋಶ ಸಹಾಯಕ ಕಾರ್ಯಪಾಲಕ ಅಭಿಯಂತರಾದ ರಾಮಚಂದ್ರ ಅಧಿಕೃತವಾಗಿ ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.
ಬಳಿಕ ಮಾತನಾಡಿದ ನೂತನ ಉಪಾಧ್ಯಕ್ಷ ಪ್ರಶಾಂತ್, ನನ್ನನ್ನು ಅವಿರೋಧವಾಗಿ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಮುಖಂಡರು ಹಾಗು ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಅಭಾರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶಿವಮ್ಮ ಜಡೇಗೌಡ, ಮಾಜಿ ಉಪಾಧ್ಯಕ್ಷ ಸೋಮಣ್ಣ, ಸದಸ್ಯರಾದ ಬಸವಣ್ಣ, ರೇಖಾ ಮಹದೇವಸ್ವಾಮಿ, ಮರಿಸ್ವಾಮಿ, ಸಣ್ಣಕ್ಕಿಗೌಡ, ವಿಮಲ ಕುಮಾರಸ್ವಾಮಿ, ಮಹದೇವಮ್ಮ ಸಿದ್ದರಾಜು, ಕೌಶಲ್ಯ, ಶೈಲಜಾ ಗೋವಿಂದರಾಜು, ಮುಖಂಡರಾದ ಎಲ್‍ಐಸಿ ಕುಮಾರ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಗೋವಿಂದರಾಜು, ಚಂದ್ರಮ್ಮ ನಾಗರಾಜು, ನಂಜುಂಡಸ್ವಾಮಿ, ಗೋವಿಂದರಾಜು, ಕುಂಬೇಶ್ವರಸ್ವಾಮಿ, ಹೊಂಗಲವಾಡಿ ಬಸವರಾಜು, ಕೆಡಿಪಿ ಸದಸ್ಯ ಸೈಯದ್ ಮುಸಾಯಿಬ್, ಚಾ ನಗರ ಯುವ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಅನಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅಪ್ಪು, ಮಹದೇವಪ್ರಸಾದ್, ಕಾರ್ತಿಕ್, ವಿಕಾಸ್, ನಿರಂಜನ್ ಚೆಕ್‍ಪೋಸ್ಟ್ ಗ್ರಾಮದ ಯಜಮಾನರು, ಮುಖಂಡರು ಇದ್ದರು.