ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ.25- ಅಸ್ಪೃಶ್ಯತೆ ಆಚರಣೆ ವಿರುದ್ಧ ಜಾಗೃತಿ ಮತ್ತು ಬಿಗಿ ಕಾನೂನು ಇದ್ದರೂ ಅನಿಷ್ಠ ಪಿಡುಗು ಇನ್ನೂ ಜೀವಂತ ಆಗಿರುವುದಕ್ಕೆ ಚಾಮರಾಜನಗರದ ಈ ಸರ್ಕಾರಿ ಶಾಲೆಯೇ ನಿದರ್ಶನವಾಗಿದೆ.
ಚಾಮರಾಜನಗರ ತಾಲೂಕಿನ ಹೊಮ್ಮ ಎಂಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಯೋಜನೆಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕವಾದ ಒಂದೇ ಕಾರಣಕ್ಕೆ ಪೋಷಕರು ವಿದ್ಯಾರ್ಥಿಗಳನ್ನು ಶಾಲೆ ಬಿಡಿಸಿ ಬೇರೆ ಶಾಲೆಗೆ ಸೇರಿಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಈಗಾಗಲೇ ಈ ಶಾಲೆಯ 12 ಮಕ್ಕಳು ಟಿಸಿ ಪಡೆದಿದ್ದಾರೆ. ಉಳಿದವರಿಂದಲೂ ಟಿಸಿ ಪಡೆಯಲು ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಈ ಶಾಲೆ ಇದೀಗ ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿದೆ.