ಚಾಮುಂಡಿಬೆಟ್ಟದ ಮೆಟ್ಟಿಲು ಸ್ವಚ್ಛತಾ ಕಾರ್ಯ

ಸಂಜೆವಾಣಿ ನ್ಯೂಸ್
ಮೈಸೂರು.ಜೂ.26:-
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಭಿವೃದ್ದಿ ಕಾರ್ಯವನ್ನು ಶತ ಶತಮಾನಗಳು ಕಳೆದರೂ, ಯಾರು ಮರೆಯಲು ಸಾಧ್ಯವಿಲ್ಲ ಎಂದು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹೇಳಿದರು.


ಸರ್ ಎಂ.ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಚಾಮುಂಡಿಬೆಟ್ಟದ ಪಾದ ಬಳಿ ಬುಧವಾರ ಏರ್ಪಡಿಸಿದ್ದ ಮೆಟ್ಟಿಲು ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಂದಿನ ಕಾಲದಲ್ಲಿ ಮೈಸೂರು ರಾಜ್ಯವನ್ನು ಸುಂದರವಾಗಿ ಕಟ್ಟಿದ್ದಾರೆ. ಯಾವುದೇ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಸರಿಯದೇ, ಜನೋಪಕಾರಿ ಕೆಲಸಗಳನ್ನು ಮಾಡಿ ಸದಾ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ ಎಂದು ತಿಳಿಸಿದರು.


ನಗರ ಪ್ರದೇಶದಲ್ಲಿ ಮನೆಗಳು, ಸ್ಟಾರ್ ಹೋಟೆಲ್‍ಗಳು ಪೌರ ಕಾರ್ಮಿಕರ ಮೇಲೆ ಅವಲಂಬಿತರಾಗಿರುವಂತೆ, ನಲ್ಲಿ ಕೆಲಸಗಾರರ ಮೇಲೂ ಅವಲಂಬಿತರಾಗಿದ್ದಾರೆ. ಗೋಡೆಗಳಲ್ಲಿ ನೀರಿನ ಪೈಪ್ ಒಡೆದಾಗ, ಅದನ್ನು ಸರಿಪಡಿಸಲು ನಲ್ಲಿ ಕೆಲಸಗಾರರೇ ಬೇಕು. ಯಾವ ಕೆಲಸವೂ ಕೀಳಲ್ಲ ಎಂದರು.


ಸರ್ ಎಂ.ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘ ಮಾಡಿಕೊಂಡು, ನಲ್ಲಿ ಮತ್ತು ಒಳಚರಂಡಿ ಕೆಲಸ ಮಾಡುತ್ತಿರುವ ಒಗ್ಗಟ್ಟಿನಲ್ಲಿ ಹೋದರೆ, ಸರಕಾರದ ಸೌಲಭ್ಯಗಳನ್ನು ಪಡೆಯಬಹುದು ಎಂದು ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಕೆ.ಆರ್.ಬ್ಯಾಂಕ್ ಉಪಾಧ್ಯಕ್ಷ ಬಸವರಾಜು, ಸಂಘದ ಅಧ್ಯಕ್ಷ ಎಸ್.ಮಹೇಶ್, ಉಪಾಧ್ಯಕ್ಷ ಎಂ.ಎಸ್.ಸುರೇಶ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ರವಿಕುಮಾರ್, ಜಂಟಿ ಕಾರ್ಯದರ್ಶಿ ಎಸ್.ಪಳನಿ, ಖಜಾಂಚಿ ಎಂ.ಪ್ರಕಾಶ್, ಚಂದ್ರೇಗೌಡ ಮತ್ತಿತರರು ಇದ್ದರು.