ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಮೇ.19: ರಾಜ್ಯದ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ಮಿಂಚಿನ ಸಂಚಲನ ನಡೆಸಿ ಅವ್ಯವಸ್ಥೆಗಳ ಅವಲೋಕನ ನಡೆಸಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿದರು.ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ, ಪುರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳು ಸೇರಿದಂತೆ ಮೀನಿನ ಮಾರುಕಟ್ಟೆಗೆ ಭೇಟಿ ನೀಡಿ ಅಶುಚಿತ್ವ ತಾಂಡವ ಆಡುತ್ತಿರುವುದನ್ನು ಕಣ್ಣಾರೆ ಕಂಡು ಮುಖ್ಯಾಧಿಕಾರಿ ನಟರಾಜ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಪಟ್ಟಣದಿಂದ ಮೈಸೂರು ನಗರಕ್ಕೆ ಬೆಳಿಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಪ್ರಯಾಣಿಕರು ಸಂಚರಿಸಲು ಇರುವ ಬಸ್ಸುಗಳ ಕೊರತೆಯ ಬಗ್ಗೆ ಸಾರ್ವಜನಿಕರು ಲೋಕಾಯುಕ್ತರ ಗಮನ ಸೆಳೆದು ಬಸ್ ವ್ಯವಸ್ಥೆ ಮಾಡಿಸಿಕೊಡುವಂತೆ ಅವಲತ್ತುಕೊಂಡರು. ಬಸ್ ನಿಲ್ದಾಣದಲ್ಲಿ ಅಶುಚಿತ್ವ ತುಂಬಿ ತುಳುಕುತ್ತಿರುವ ಬಗ್ಗೆ ವಿಭಾಗೀಯ ಸಾರಿಗೆ ಅಧಿಕಾರಿ ರವಿ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ ಮೀನಿನ ಮಾರುಕಟ್ಟೆಯ ತ್ಯಾಜ್ಯ ನೀರು ಸೇರಿದಂತೆ ಪಟ್ಟಣದ ಒಳಚರಂಡಿಯ ತ್ಯಾಜ್ಯ ನೀರು ಚನ್ನಪ್ಪನ ಕಟ್ಟೆಯ ನೀರಿನ ಮೂಲಕ ಹೊಸಹೊಳಲು ಕೆರೆ ಹಾಗೂ ಪಟ್ಟಣದ ಶ್ರವಣಬೆಳಗೊಳ ರಸ್ತೆಯ ಕಡೆಯಿಂದ ಕಲುಷಿತ ನೀರು ದೇವಿರಮ್ಮಣ್ಣಿ ಕೆರೆಗೆ ಸೇರುತ್ತಿರುವ ಬಗ್ಗೆ ಪಟ್ಟಣದ ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಪುರಸಭೆಯ ಮುಖ್ಯಾಧಿಕಾರಿ ನಟರಾಜ್ ಹಾಗೂ ಹೆಲ್ತ್ ಇನ್ಸ್ ಪೆಕ್ಟರ್ ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡರು. ಬಸ್ ನಿಲ್ದಾಣದೊಳಗಿನ ಅವ್ಯವಸ್ಥೆಯ ಬಗ್ಗೆ ತೀವ್ರ ಆಕ್ರೋಶಗೊಂಡ ಉಪ ಲೋಕಾಯುಕ್ತರು ನೀನು ಡಿಪೆÇೀ ಮ್ಯಾನೇಜರ್ ಅಲ್ಲ, ಡ್ಯಾಮೇಜರ್, ನಿನ್ನ ಮನೆಯ ಆವರಣವನ್ನು ಹೀಗೆ ಗಬ್ಬಾಗಿ ಇಟ್ಕೋತೀಯ, ನಾಚಿಕೆ ಆಗ್ಬೇಕು ನಿನ್ನ ಕಾರ್ಯ ವೈಖರಿಗೆ” ಎಂದು ಸಾರಿಗೆ ಅಧಿಕಾರಿಯನ್ನು ಛೇಡಿಸಿದರು.ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಮತ್ತು ಚಿಕಿತ್ಸೆಯ ಬಗ್ಗೆ ಕಾಳಜಿ ವಹಿಸದ ವೈದ್ಯರು ಹಾಗೂ ಸ್ವಚ್ಛತೆ ಕಾಪಾಡದ ಸಿಬ್ಬಂದಿಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ, ಕೆ.ಆರ್.ಪೇಟೆ ಪುರಸಭೆ, ಕೆ.ಆರ್.ಪೇಟೆ ಬಸ್ ಡಿಪೆÇೀ ಮ್ಯಾನೇಜರ್ ಹಾಗೂ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸುವುದಾಗಿ ಪತ್ರಕರ್ತರಿಗೆ ತಿಳಿಸಿದರು.
ತಮ್ಮ ಕೆ.ಆರ್.ಪೇಟೆ ಪಟ್ಟಣದ ಭೇಟಿಯ ಸಮಯದಲ್ಲಿ ಸಾರ್ವಜನಿಕರು ನೀಡಿದ ದೂರುಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ವಿವರವಾದ ವರದಿಯನ್ನು ಕಳಿಸಿಕೊಡುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ್ ಲೆಫ್ಟಿನೆಂಟ್ ಕರ್ನಲ್ ಡಾ.ಅಶೋಕ್ ಆವರಿಗೆ ನಿರ್ದೇಶನ ನೀಡಿದರು.
ಲೋಕಾಯುಕ್ತರ ನಗರ ಸಂಚಾರದ ಸಂದರ್ಭದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ, ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್, ತಹಶೀಲ್ದಾರ್ ಡಾ.ಎಸ್.ಯು.ಅಶೋಕ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಪುರಸಭೆಯ ಮುಖ್ಯಾಧಿಕಾರಿ ನಟರಾಜ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಡಾ.ನರಸಿಂಹ ರಾಜು, ಪೆÇಲೀಸ್ ಇನ್ಸ್ ಪೆಕ್ಟರ್ ಆನಂದೇಗೌಡ, ಪಿ.ಎಸ್.ಐ ನವೀನ್, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.