ಪ್ರತಿಭಾವಂತನಿಗೆ ನಾಯಕನ ಪಟ್ಟ

ಚೈಲ್ಡುಗಳಿಗೆ ಫೀಲ್ಡ್ ಮಾಡಲು ರೆಡಿಯಾದ ಕಾಕ್ರೋಚ್

ಟಗರು ಖ್ಯಾತಿಯ ಪೊಗರಿನ ಹುಡುಗ ಕಾಕ್ರೋಚ್ ಸುಧೀ ಅಪ್ಪಟ ಪ್ರತಿಭಾವಂತ. ಸುಧೀ ಇದೀಗ ನಾಯಕನಾಗಿ ಬಡ್ತಿಪಡೆಯುತ್ತಿದ್ದಾರೆ. ಇವರು ನಟಿಸುತ್ತಿರುವ ನೂತನ ಚಿತ್ರ ‘ಚೈಲ್ಡು’. ರೌಡಿಸಂ ಕಥಾಹಂದರದ ಚಿತ್ರವಾದರೂ ಸಹ ಪ್ರೇಮಿಗಳ ಕಥೆ ಇದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆಯನ್ನು ಸಮಾಜ ಸೇವಕರಾದ ಕಿರಣ್ ರೆಡ್ಡಿ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಕಮಲ ಫಿಲಂಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ ಅವರು ನಿರ್ಮಿಸುತ್ತಿರುವ, ಹಫ್ತಾ ಚಿತ್ರದ ಖ್ಯಾತಿಯ ಪ್ರಕಾಶ್ ಹೆಬ್ಬಾಳ್ ನಿರ್ದೇಶನ ಮಾಡುತ್ತಿದ್ದಾರೆ.

ಹಫ್ತಾ ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಚಿತ್ರವಿದು. ಆಕ್ಷನ್, ಕಾಮಿಡಿ, ಸೆಂಟಿಮೆಂಟ್, ಲವ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳನ್ನೊಳಗೊಂಡಿರುವ ಚಿತ್ರವಿದು. ಇಂದಿನಿಂದಲೇ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ. ತಾರಾ ಅನುರಾಧ, ಅಶ್ವಿನ್ ಹಾಸನ್, ವಲ್ಲಭ್, ಉದಯ್ ಪ್ರಸನ್ನ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿರುತ್ತಾರೆ. ರಂಗಾಯಣ ರಘು ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಸುಧೀ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಪ್ರಕಾಶ್ ಹೆಬ್ಬಾಳ್ ತಿಳಿಸಿದರು.

ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ. ನಿರ್ದೇಶಕ ಪ್ರಕಾಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ಅದಕ್ಕಿಂತ ನೀವು ಈ ಚಿತ್ರದ ನಾಯಕ ಅಂತ ಹೇಳಿದ್ದು ಖುಷಿಯಾಯಿತು‌. ನನಗೆ ತಕ್ಕಂತಹ ಕಥೆಯನ್ನು ನಿರ್ದೇಶಕರು ಮಾಡಿದ್ದಾರೆ. ರೌಡಿಸಂ ಚಿತ್ರವಾದರೂ, ಲವ್ ಕೂಡ ಇರುತ್ತದೆ‌. ನನ್ನ ಲುಕ್ ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ ನಟ ಕಾಕ್ರೋಜ್ ಸುಧೀ, ತಮ್ಮ ಬೆಳವಣಿಗೆಗೆ ಕಾರಣರಾದ ಮಾಧ್ಯಮದವರಿಗೆ ಧನ್ಯವಾದ ಹೇಳಿದರು.

ಛಾಯಾಗ್ರಾಹಕ ಸಿದ್ದು ಕೆಂಚನಹಳ್ಳಿ, ಕಲಾವಿದರಾದ ಅಶ್ವಿನ್ ಹಾಸನ್, ವಲ್ಲಭ್ ಹಾಗೂ ಉದಯ್ ಪ್ರಸನ್ನ ಮುಂತಾದರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.