ಮಣ್ಣೆತ್ತಿನ ಅಮಾವಾಸ್ಯೆ: ಮಾದಪ್ಪನ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ಸಂಜೆವಾಣಿ ವಾರ್ತೆ
ಹನೂರು ಜೂ 26 :-
ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಲೆ ಮಾದಪ್ಪನ ಸನ್ನಿಧಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಸಾಗರ ಹರಿದು ಒಂದು ವಿಶೇಷ ಪೂಜೆ ಪುನಸ್ಕಾರಗಳನ್ನು ಸಲ್ಲಿಸಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ.


Àುಹದೇಶ್ವರ ಬೆಟ್ಟದಲ್ಲಿ ಆಷಾಡ ಮಾಸದ ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಇಂದು ಬುಧವಾರ ಮುಂಜಾನೆ ಮಲೆ ಮಾದಪ್ಪನ ಅಭಿಷೇಕ ಮಹಾ ಮಂಗಳಾರತಿ ವಿಶೇಷ ಪೂಜೆ ಕೈಂಕರ್ಯಗಳು ಧಾರ್ಮಿಕ ವಿಧಿ ವಿಧಾನಗಳಂತೆ ವಿವಿಧ ಕಾರ್ಯಾ ಕ್ರಮ ಜರುಗಿತು. ಮಂಗಳವಾರ ರಾತ್ರಿ ಎಣ್ಣೆ ಮಜ್ಜನ ಸೇವೆ ಪೂಜಾ ಕೈಂಕರ್ಯಗಳು ನಡೆಯಿತು. ಮಲೆ ಮಾದಪ್ಪನ ದರ್ಶನಕ್ಕೆ ಆಗಮಿಸಿದ ಸಹಸ್ತ್ರಾರು ಭಕ್ತಾದಿಗಳು ಹರಕೆ ಪೂಜೆ ಸಲ್ಲಿಸಿದ್ದಾರೆ. ಎಣ್ಣೆ ಮಜ್ಜನ ಸೇವೆಯನ್ನು ಸಲ್ಲಿಸಿದ್ದಾರೆ. ಮಲೆ ಮಾದಪ್ಪನ ದೇವಾಲಯದ ಸುತ್ತಲೂ ಉರುಳು ಸೇವೆ, ಪಂಜಿನ ಸೇವೆ ಸಲ್ಲಿಸಿ ಪ್ರದಕ್ಷಿಣೆ ಹಾಕಿ ಧೂಪ ದೀಪ ಕರ್ಪೂರ ಹಚ್ಚಿ ಪ್ರಾರ್ಥನೆ ಸಲ್ಲಿಸಿದರು.


ಹುಲಿ ವಾಹನ, ರುದ್ರಾಕ್ಷಿ ಮಂಟಪ, ಬಸವ ವಾಹನ ಎಳೆದು ದಂಡಿನ ಕೋಲು ಹಿಡಿದು ಪ್ರದಕ್ಷಿಣೆ ಹಾಕಿ ಹರಕೆ ಪೂಜೆ ಸಲ್ಲಿಸಿದರು. ಸಂಜೆಯ ವೇಳೆಗೆ ಚಿನ್ನದ ರಥೋತ್ಸವದಲ್ಲಿ ಭಾಗಿಯಾಗಿ ದಂಡಿನ ಕೋಲು ಹಿಡಿದು ರಥವನ್ನು ಎಳೆದು ದೇವಾಲಯ ಸುತ್ತಲೂ ಪ್ರದಕ್ಷಿಣೆ ಹಾಕುತ್ತಾ ಉಘೇ ಉಘೇ ಮಾದಪ್ಪ….. ಎಂದು ಜೈಕಾರ ಹಾಕಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ.