ವಸತಿ ಸಚಿವ ಜಮೀರ್ ರಾಜೀನಾಮೆಗೆ ಸಾಗಡೆ ಗ್ರಾ.ಪಂ. ಸದಸ್ಯ ಗುರುಪ್ರಸಾದ್ ಒತ್ತಾಯ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ.24-
ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಚಾರ ಬಗ್ಗೆ ಸ್ವಪಕ್ಷದ ಶಾಸಕರೇ ಹೇಳಿದ್ದು, ಕಳೆದ ಎರಡು ವರ್ಷಗಳಿಂದ ಪಂಚಾಯಿತಿಗಳಿಗೆ ಮನೆ ಹಂಚಿಕೆ ಮಾಡಿಲ್ಲ. ಹಣ ಕೊಟ್ಟವರಿಗೆ ಮನೆಗಳನ್ನು ಮಂಜೂರು ಮಾಡಲಾಗಿದೆ. ವಸತಿ ಸಚಿವ ಜಮೀರ್ ಅಹಮದ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಲಿ ಎಂದು ಸಾಗಡೆ ಗ್ರಾಮ ಪಂಚಾಯಿತಿ ಸದಸ್ಯ ಗುರುಪ್ರಸಾದ್ ಒತ್ತಾಯಿಸಿದ್ದಾರೆ.


ರಾಜ್ಯದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚಾಯಿತಿಗಳಿಗೆ ಇದುವರೆಗೆ ಒಂದು ಮನೆಗಳನ್ನು ಹಂಚಿಕೆ ಮಾಡಿಲ್ಲ. ವಸತಿ ಸಚಿವರು ಪಂಚಾಯಿತಿ ಮಟ್ಟದಲ್ಲಿ ಮನೆ ಹಂಚಿಕೆ ಮಾಡಿಲ್ಲ. ಪ್ರಭಾವಿಗಳು ಹಾಗು ಹಣ ಕೊಟ್ಟವರಿಗೆ ಮಾತ್ರ ಮನೆ ಮಂಜೂರಾಗಿದೆ. ಈ ಬಗ್ಗೆ ಸ್ವಪಕ್ಷದ ಶಾಸಕ ಎಚ್.ಕೆ. ಪಾಟೀಲ್ ಅವರು ನೀಡಿರುವ ಹೇಳಿಕೆ ನಿಜವಾಗಿದೆ. ಶಾಸಕರ ಶಿಫಾರಸ್ಸು ಪತ್ರ ಹಾಗೂ ಮಾತಿಗೆ ಮನ್ನಣೆ ಇಲ್ಲವೆಂದ ಮೇಲೆ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೂಡಲೇ ಸಚಿವ ಜಮೀರ್ ಅವರಿಂದ ರಾಜೀನಾಮೆ ಪಡೆದು ತನಿಖೆಗೆ ಒಳಪಡಿಸಬೇಕು ಎಂದು ಒತ್ತಯಿಸಿದರು.


ಸಾಗಡೆ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಎರಡು ವರ್ಷಗಳಿಂದ ಒಂದು ಆಶ್ರಯ ಮನೆಗಳನ್ನು ಹಂಚಿಕೆ ಮಾಡಲು ಸಾಧ್ಯವಾಗಿಲ್ಲ. ಇಂಥ ಭ್ರಷ್ಟ ಮಂತ್ರಿಗಳಿದ್ದರೆ ಬಡವರಿಗೆ ಸೂರು ಕಲ್ಪಿಸುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಶಾಸಕ ಎಚ್.ಕೆ. ಪಾಟೀಲ್ ಅವರು ಬಹಳ ನೋವಿನಿಂದ ಹೇಳಿಕೆ ನೀಡಿದ್ದಾರೆ. ಹೀಗಾಗಿ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣವನ್ನು ನ್ಯಾಯಾಂಗ ತನಿಖೆ ಒಳಪಡಿಸಬೇಕು ಎಂದು ಗುರುಪ್ರಸಾದ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.