ಸರ್ಕಾರಿ ಶಾಲೆಯಲ್ಲಿ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

ಸಂಜೆವಾಣಿ ನ್ಯೂಸ್
ಮೈಸೂರು: ಜೂ.20:-
ನಗರದ ಕುಕ್ಕರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ರವರ ಹುಟ್ಟುಹಬ್ಬವನ್ನು ಮೈಸೂರು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದನ್ ಗೌಡ ಅವರ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕವನ್ನು ವಿತರಿಸುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಚಂದನ್ ಗೌಡ ಅವರು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ ಅವರ ಆದೇಶದ ಮೇರೆಗೆ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಪ್ರಧಾನಿಯಾಗಿ ದೇಶದ ನೊಂದವರ ಪಾಲಿನ ಆಶಾಕಿರಣವಾಗಬೇಕೆಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇವೆ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಟ್ಟಿಹುಂಡಿ ಸುನಿಲ್ ಸೇರಿದಂತೆ ಯುವ ಕಾಂಗ್ರೆಸ್ ಉಸ್ತುವಾರಿಗಳು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಿವಶಂಕರ್ ಜಿಲ್ಲಾ ಉಪಾಧ್ಯಕ್ಷರಾದ ಫಯಾಜ್ ಮಹಮ್ಮದ್ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಯುವ ಅಧ್ಯಕ್ಷ ರಾಜೇಶ್ ಕಾರಾಗೃಹ ಮಂಡಳಿ ಪವನ್ ಸಿದ್ದರಾಮ್ ಉಪಾಧ್ಯಕ್ಷರುಗಳಾದ ನಿಂಗಯ್ಯ ರಾಜು ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಹರೀಶ್ ಸಿಂಗಾರಿಪುರ ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷರಾದ ಆದರ್ಶ್ ಜಿಲ್ಲಾಮಟ್ಟದ ಪದಾಧಿಕಾರಿಗಳಾದ .ವಿಜಯ ಕುಮಾರ್ .ಕೃಷ್ಣ, ಜಿ ಮಹೇಶ್ .ಸಂಜಯ್. ಕುಮಾರ್. ಶಾಲಾ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.