ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೆಟ್ಟಆಮದು ನೀತಿಯಿಂದಾಗಿ ಭಾರತದ ರೈತರು ಅತ್ಯಂತ ಸಂಕಷ್ಟವನ್ನು ಅನುಭವಿಸುವ ಪರಿಸ್ಥಿತಿ ಉಂಟಾಗಿದೆ. ಸಾಮ್ರಾಜ್ಯಶಾಹಿಯ ನೇತೃತ್ವ ವಹಿಸಿರುವ ಅಮೇರಿಕಾದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಮೇಲೆ ಸುಂಕ ಸಮರವನ್ನು ಸಾರಿದ್ದಾರೆ. ಇದರಿಂದ ಭಾರತದ ಕೃಷಿ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ ತಿರಸ್ಕರಿಸಲ್ಪಡುತ್ತಿವೆ.ವಿಚಾರಸಂಕಿರಣದ ಅಧ್ಯಕ್ಷತೆಯನ್ನು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಅಧ್ಯಕ್ಷ ಯು.ಬಸವರಾಜು ವಹಿಸಿದ್ದರು, ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರದಾನ ಕಾರ್ಯದರ್ಶಿ ದೇವಿ, ಕೃಷಿ ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಪುಟ್ಟಮಾದು, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್ ಎಲ್ ಭರತ್ ರಾಜ್, ಸಹ ಸಂಚಾಲಕ ಎನ್ ಲಿಂಗರಾಜಮೂರ್ತಿ, ಎಮ್ ಇ ಮಹಾದೇವು, ಪ್ರಮೀಳಾ, ಅಬ್ದುಲ್ ಸುಕೂರ್, ವಿಶ್ವನಾಥ್ ಮುಂತಾದವರು ಉಪಸ್ಥಿತರಿದ್ದರು.