
ಎಐಸಿಸಿ ಅಧ್ಯಕ್ಷರು ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆಜೀ ಅವರು ಅನಾರೋಗ್ಯದಿಂದ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಿನ್ನೆ ಮನೆಗೆ ಬೆಂಗಳೂರು ನಗರದ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರನ್ನು ಭೇಟಿ ಮಾಡಿ ಡಾ. ಮಲ್ಲಿಕಾರ್ಜುನ ಖರ್ಗೆಜಿ ಅವರನ್ನು ಮಾಜಿ ಸಚಿವರಾದ ರಾಜಶೇಖರ ಪಾಟೀಲ, ಶಾಸಕ ಡಾ.ಚಂದ್ರಶೇಖರ ಪಾ ಮಾಜಿ ಶಾಸಕರು ಅರವಿಂದ ಕುಮಾರ ಅರಳಿ, ಕೆ.ಪುಂಡಲಿಕರಾವ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ತಮ್ಮ ಅನಾರೋಗ್ಯದ ನಡುವೆಯೂ ಕೂಡ ನಮ್ಮ ಜಿಲ್ಲೆಯ ಜನರ ಕುರಿತು ಚಿಂತಿಸುವ ಅವರು ನಮ್ಮ ಬೀದರ ಭಾಗದಲ್ಲಿನ ಪ್ರವಾಹ ಪರಿಸ್ಥಿತಿ, ಪರಿಹಾರ ಕಾರ್ಯದ ಕುರಿತು ಮಾಹಿತಿ ಪಡೆದರು. ಇಂತಹ ಮಾನವೀಯ ಗುಣದಿಂದಲೇ ಖರ್ಗೆಯವರು ನಾಡಿನ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.