ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ಕೆಪಿಸಿಸಿ ಕಚೇರಿಯಲ್ಲಿ ಪೌರಕಾರ್ಮಿಕರಿಗೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹೆಚ್.ಎಂ. ರೇವಣ್ಣನವರು ಆಹಾರ ಕಿಟ್‌ಗಳನ್ನು ವಿತರಣೆ ಮಾಡಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಎಂ. ನಾರಾಯಣ ಸ್ವಾಮಿ, ಬಿಡಿಎ ಸದಸ್ಯ ಪಿ. ಗಾಂಧಿ, ಕೆಪಿಸಿಸಿ ಸದಸ್ಯರು ಹಾಗೂ ಕಂಟ್ರೋಲ್ ರೂಮ್ ಸದಸ್ಯ ಎಸ್.ಎ. ಕಿರಣ್ ಕುಮಾರ್ ಮತ್ತಿತರರು ಇದ್ದಾರೆ.