
ಕಾಳಗಿ: ಪಟ್ಟಣದ ತಹಶೀಲ್ದಾರ ಆವರಣದಲ್ಲಿ ೮೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು.
ತಹಶೀಲ್ದಾರ್ ಪೃಥ್ವಿರಾಜ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಬಳಿಕ ಅವರು ಧ್ವಜಾರೋಹಣ ನೆರವೇರಿಸಿದರು.
ಈ ವೇಳೆಯಲ್ಲಿ ತಾಲೂಕು ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಗ್ರೇಡ್ -೨ ತಹಸೀಲ್ದಾರ್ ರಾಜೇಶ್ವರಿ, ತಾ.ಪಂ ಇ.ಓ ಬಸಲಿಂಗಪ್ಪ ಡಿಗ್ಗಿ, ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ ಐ ತಿಮಯ್ಯ್ ಬಿ. ಕೆ ಸೇರಿದಂತೆ ತಾಲೂಕಿನ ವಿವಿಧ ಅಧಿಕಾರಗಳು ಉಪಸ್ಥಿತರಿದ್ದರು.


































