ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ

ವಿಜಯಪುರ,ಜೂ.26:ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇತ್ತೀಚಿಗೆ ಡಿಪೆÇ್ಲೀಮಾ ಮೊದಲನೆಯ ವರ್ಷದ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಡಿಪೆÇ್ಲೀಮಾದ ಮೊದಲನೇ ವರ್ಷದಲ್ಲಿ ಪ್ರವೇಶವನ್ನು ಪಡೆದಿರುವ ಎಲ್ಲ ವಿದ್ಯಾರ್ಥಿಗಳಿಗೆ ಬಹು ತಾಂತ್ರಿಕ ಕಾಲೇಜಿನ ಪರಿಚಯವನ್ನು ಮಾಡಲಾಯಿತು. ಅದರಲ್ಲಿ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಪ್ರಾಚಾರ್ಯ ಎಂ. ಇರ್ಫಾನ್ ಹಾಗೂ ಅತಿಥಿಗಳು ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎಂ. ಇರ್ಫಾನ್ ಅಧ್ಯಕ್ಷತೆಯನ್ನು ವಹಿಸಿದರು. ಅಲ್ಲದೆ ಮೊದಲನೇ ವರ್ಷದಲ್ಲಿ ಪ್ರವೇಶವನ್ನು ಪಡೆದಿರುವ ಎಲ್ಲ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಡಿಪೆÇ್ಲೀಮಾದ ಬಗ್ಗೆ ಹಲವಾರು ವಿಷಯಗಳನ್ನು ತಿಳಿಸಿಕೊಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಿಕ್ಯಾಬ್ ಸಂಸ್ಥೆಯ ಎ. ಆರ್. ಎಸ್. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎಚ್. ಕೆ. ಯಡಹಳ್ಳಿ ಅವರು ಮಾತನಾಡಿ, ವಿದ್ಯಾರ್ಥಿಗಳು ಇಂದಿನ ಕಾಲಘಟ್ಟಕ್ಕೆ ಬೇಕಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಕರೆ ನೀಡಿದರು. ಅದರೊಂದಿಗೆ ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪೆÇ್ರ. ಆಸಿಫ್ ಇಕ್ಬಾಲ್ ದೊಡ್ಮನಿ ಸಹ ಅತಿಥಿಗಳಾಗಿ ಈ ಕಾರ್ಯಕ್ರಮಕ್ಕೆ ಶೋಭೆ ತಂದು ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಬಗ್ಗೆ ಹಲವಾರು ವಿಷಯಗಳ ಮಾಹಿತಿಯನ್ನು ಸಹ ಕೊಟ್ಟರು.
ಈ ಕಾರ್ಯಕ್ರಮಕ್ಕೆ ಸಿಕ್ಯಾಬ್ ಸಂಸ್ಥೆಯ ಅಧ್ಯಕ್ಷ ಡಾ. ಎಸ್. ಎ. ಪುಣೇಕರ್, ಕಾರ್ಯದರ್ಶಿ ಎ. ಎಸ್. ಪಾಟೀಲ್ ಮತ್ತು ಸಂಸ್ಥೆಯ ನಿರ್ದೇಶಕ ಸಲಾಹುದ್ದೀನ ಮಾರ್ಗದರ್ಶನ ಮಾಡಿದರು.
ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಕುರಿತು ಪೆÇ್ರ. ಬಿ. ಎಸ್. ಥೋರತ ಹಾಗೂ ಪೆÇ್ರ. ಅರವಿಂದ ಕೋಟಿ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮವನ್ನು ಪೆÇ್ರ. ಫಾತಿಮಾ ಸೋಲಾಪುರ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪೆÇ್ರ. ಎ. ಎಂ. ಆಸಿಫ್, ಪೆÇ್ರ. ಹಸನ್ ಜಮಾದಾರ್, ಪೆÇ್ರ. ಮಾಲನಬಿ, ಪೆÇ್ರ. ಸಬಾನಾಜ, ಪೆÇ್ರ. ಶಾಹೀನ್ ಮುಂತಾದವರು ಉಪಸ್ಥಿತರಿದ್ದರು.