ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯತಿಥಿ

ವಿಜಯಪುರ,ನ.1:ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ 41 ನೇ ಪುಣ್ಯ ಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತ ದೇಶದ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಹಾಗೂ ಬಡಜನರ ಸಲುವಾಗಿ ಅಪಾರವಾದ ಯೋಜನೆಗಳ ಮೂಲಕ ಕೋಟ್ಯಂತರ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಕೊಟ್ಟು ಅವರನ್ನು ಸಬಲರನ್ನಾಗಿ ಮಾಡಿದ ಧೀಮಂತ ನಾಯಕಿ ಇಂದಿರಾ ಗಾಂಧಿ ಎಂದು ಗುಣಗಾನ ಮಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ. ಎಂ. ಮುಲ್ಲಾ (ದ್ಯಾಬೇರಿ), ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ ಬಕ್ಷಿ, ಸರಫರಾಜ ಮಿರ್ದೆ, ರಜಾಕಸಾಬ ಕಾಖಂಡಗಿ, ಅಬೂಬಕರ ಕಂಬಾಗಿ, ದಿಲೀಪ ಪ್ರಭಾಕರ, ಜಗದೇವಪ್ಪ ಪಾಟೀಲ ಹೊರ್ತಿ, ವಿದ್ಯಾಧರ ಪಾಟೀಲ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.