Home ಜಿಲ್ಲೆ ಮೈಸೂರು ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು ಅನಿರೀಕ್ಷಿತ ಪರಿವೀಕ್ಷಣೆ

ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು ಅನಿರೀಕ್ಷಿತ ಪರಿವೀಕ್ಷಣೆ

ಸಂಜೆವಾಣಿ ನ್ಯೂಸ್
ಮೈಸೂರು.ಜೂ.26:
ರೈಲ್ವೆ ಮಂಡಳಿಯ ನಿರ್ದೇಶನಗಳ ಅನ್ವಯ, ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀ ಮುದಿತ್ ಮಿತ್ತಲ್ ಅವರು ಶಾಖಾ ಅಧಿಕಾರಿಗಳೊಂದಿಗೆ ಸೇರಿ ರೈಲು ಸಂಖ್ಯೆ 16236 ಟುಟಿಕೋರಿನ್ ಎಕ್ಸ್‍ಪ್ರೆಸ್‍ನಲ್ಲಿ ಅನಿರೀಕ್ಷಿತ ಪರಿವೀಕ್ಷಣೆ ನಡೆಸಿದರು.

ಪರಿಶೀಲನೆಯ ವೇಳೆ ಅಗ್ನಿಶಾಮಕ ಉಪಕರಣಗಳ ಲಭ್ಯತೆ ಮತ್ತು ಸ್ಥಿತಿ, ಪ್ರಯಾಣಿಕರ ಸೌಲಭ್ಯಗಳು ಹಾಗೂ ಸುರಕ್ಷತಾ ವ್ಯವಸ್ಥೆಗಳನ್ನೂ ಸಮಗ್ರವಾಗಿ ಪರಿಶೀಲಿಸಲಾಯಿತು. ಈ ಪರಿಶೀಲನೆಯ ಉದ್ದೇಶ ಎಲ್ಲಾ ಸುರಕ್ಷತಾ ಕ್ರಮಗಳು ಸಮರ್ಪಕವಾಗಿ ಜಾರಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವುದು ಮತ್ತು ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸೇವೆ ಹಾಗೂ ಆರಾಮದಾಯಕ ಪ್ರಯಾಣವನ್ನು ಒದಗಿಸುವುದಾಗಿದೆ.

ಡಿಆರ್‍ಎಂ ಅವರು ಸುರಕ್ಷತಾ ನಿಯಮಾವಳಿಗಳ ಕಟ್ಟುನಿಟ್ಟಿನ ಪಾಲನೆಯ ಅಗತ್ಯತೆಯನ್ನು ಒತ್ತಿಹೇಳಿ, ಸಂಬಂಧಿತ ಅಧಿಕಾರಿಗಳಿಗೆ ಪ್ರಯಾಣಿಕರ ಸೇವೆ ಮತ್ತು ಸುರಕ್ಷತಾ ವ್ಯವಸ್ಥೆಗಳಲ್ಲಿ ಉನ್ನತ ಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದರು.

ಇದು ಪ್ರಯಾಣಿಕರ ಸುರಕ್ಷತೆ, ಆರಾಮ ಹಾಗೂ ಒಟ್ಟು ಪ್ರಯಾಣ ಅನುಭವವನ್ನು ಹೆಚ್ಚಿಸುವತ್ತ ಭಾರತೀಯ ರೈಲ್ವೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.