
ಕಲಬುರಗಿ,ಜು.3-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಪೆÇಲೀಸ್ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 10 ಹೊಸ ಪೆÇಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಅನುಮೋದನೆ ನೀಡಲಾಗಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2026-27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾಗಿದ್ದಂತೆ, ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೆÇಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಒಟ್ಟು ?30 ಕೋಟಿ ಅನುದಾನವನ್ನು ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಈ ಯೋಜನೆಯಡಿ ಕೆಳಕಂಡ 10 ಪೆÇಲೀಸ್ ಠಾಣೆಗಳಿಗೆ ಆಧುನಿಕ ಕಟ್ಟಡಗಳು ನಿರ್ಮಾಣವಾಗಲಿವೆ:
1.ಉಪ್ಪಿನಂಗಡಿ ಪೆÇಲೀಸ್ ಠಾಣೆ-ದಕ್ಷಿಣ ಕನ್ನಡ ಜಿಲ್ಲೆ, 2.ಕುಂದಗೋಳ ಪೆÇಲೀಸ್ ಠಾಣೆ-ಧಾರವಾಡ ಜಿಲ್ಲೆ, 3.ಅರಸೀಕೆರೆ ಗ್ರಾಮಾಂತರ ಪೆÇಲೀಸ್ ಠಾಣೆ-ಹಾಸನ ಜಿಲ್ಲೆ, 4.ಸುರಪುರ ಪೆÇಲೀಸ್ ಠಾಣೆ-ಯಾದಗಿರಿ ಜಿಲ್ಲೆ, 5.ಮುದ್ದೇಬಿಹಾಳ ಪೆÇಲೀಸ್ ಠಾಣೆ-ವಿಜಯಪುರ ಜಿಲ್ಲೆ, 6.ಕುಷ್ಟಗಿ ಪೆÇಲೀಸ್ ಠಾಣೆ-ಕೊಪ್ಪಳ ಜಿಲ್ಲೆ, 7.ಸಿರವಾರ ಪೆÇಲೀಸ್ ಠಾಣೆ-ರಾಯಚೂರು ಜಿಲ್ಲೆ, 8.ಸಕಲೇಶಪುರ ಗ್ರಾಮಾಂತರ ಪೆÇಲೀಸ್ ಠಾಣೆ-ಹಾಸನ ಜಿಲ್ಲೆ, 9.ಬಸವನಬಾಗೇವಾಡಿ ಪೆÇಲೀಸ್ ಠಾಣೆ-ವಿಜಯಪುರ ಜಿಲ್ಲೆ, 10.ಹುಣಸೂರು ಗ್ರಾಮಾಂತರ ಪೆÇಲೀಸ್ ಠಾಣೆ-ಮೈಸೂರು ಜಿಲ್ಲೆ.
ಈ ಹೊಸ ಕಟ್ಟಡಗಳು ನಿರ್ಮಾಣವಾದ ನಂತರ ಪೆÇಲೀಸ್ ಸಿಬ್ಬಂದಿಗೆ ಉತ್ತಮ ಕಾರ್ಯಪರಿಸರ ದೊರೆಯಲಿದ್ದು, ಸಾರ್ವಜನಿಕರಿಗೆ ವೇಗವಾದ ಹಾಗೂ ಸುಲಭ ಪೆÇಲೀಸ್ ಸೇವೆ ಒದಗಿಸಲು ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಬೆಳೆಯುತ್ತಿರುವ ಭದ್ರತಾ ಸವಾಲುಗಳನ್ನು ಎದುರಿಸಲು ಪೆÇಲೀಸ್ ಇಲಾಖೆಯ ಮೂಲಸೌಕರ್ಯವನ್ನು ಆಧುನೀಕರಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರಾಜ್ಯ ಸರ್ಕಾರವು ನಾಗರಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಅತ್ಯುನ್ನತ ಆದ್ಯತೆಯಾಗಿ ಪರಿಗಣಿಸಿದ್ದು, ಪೆÇಲೀಸ್ ಇಲಾಖೆಯನ್ನು ತಂತ್ರಜ್ಞಾನ ಹಾಗೂ ಮೂಲಸೌಕರ್ಯದ ದೃಷ್ಟಿಯಿಂದ ಇನ್ನಷ್ಟು ಬಲಿಷ್ಠಗೊಳಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ನಿರ್ಧಾರದಿಂದ ರಾಜ್ಯದ ಪೆÇಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ, ಪರಿಣಾಮಕಾರಿ ಮತ್ತು ಆಧುನಿಕವಾಗಲಿದ್ದು, ಸಾರ್ವಜನಿಕ ಸೇವಾ ವಿತರಣೆಯಲ್ಲಿ ಹೊಸ ಗುಣಮಟ್ಟವನ್ನು ನಿರ್ಮಿಸಲಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.


























