
ಸಂಜೆವಾಣಿ ವಾರ್ತೆ,
ವಿಜಯಪುರ,ಮೇ.೨೫: ಪ್ರತಿಯೊಬ್ಬರು ಸನ್ಮಾರ್ಗದಲ್ಲಿ ಜೀವನ ಸಾಗಿಸಿದರೇ ಯಾವುದೇ ರೋಗಗಳನ್ನು ಬರಲಾರದ ಹಾಗೇ ಹಾಗೂ ನಿಯಂತ್ರಿಸಲು ಸಾಧ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.
ವಿಜಯಪುರದ ಸಂತ ಅನ್ನಮ್ಮನವರ ಚಚ್Àðನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಷನ್ಸ್ ಸೊಸಾಯಿಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕÀ, ಜಿಲ್ಲೆಯ ಎಆರ್ಟಿ ಮತ್ತು ಐಸಿ ಟಿಸಿ ಹಾಗೂ ಸಿಂಧನೂರ ಸಮರ್ಪಣಾ ಅಭಿವೃದ್ಧಿ ಸಂಸ್ಥೆ, ವಿಜಯಪುರ ಸಂಪರ್ಕ ಕಾರ್ಯಕರ್ತರ ಯೋಜನೆ ಅವರ ಸಂಯುಕ್ತಾಶ್ರಯದಲ್ಲಿ ಪಿಎಲ್ ಎಚ್ಐವಿ ಗಳ ವಧುವರರ ರಾಜ್ಯ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿಗೆ ಹಲವಾರು ಕಾಯಿಲೆಗಳು ಬರುತ್ತಿವೆ. ಅವುಗಳನ್ನು ನಿಯಂತ್ರಿಸಲು ಜಾಗೃತಿಯ ಜೊತೆಗೆ ನಮ್ಮಲ್ಲಿ ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ವಿಜಯಪುರ ಜಿಲ್ಲೆಯಲ್ಲಿ ಎಚ್ಐವಿ ಸೋಂಕಿತರ ರಾಜ್ಯ ಮಟ್ಟದ ಸಮ್ಮೇಳನ ಹಮ್ಮಿಕೊಂಡಿದ್ದು ಅತ್ಯಂತ ಹೆಮ್ಮೆಯ ವಿಷಯ. ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕೆಲಸ ಶ್ಲಾಘನೀಯವಾದದ್ದು. ಇಂತಹ ಸಮಾವೇಶಗಳಿಂದ ಸುಂದರವಾದ ಬದುಕು ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ, ಎಚ್.ಐ.ವಿ ಸೋಂಕಿತರು ಅಸ್ಪೃಶ್ಯರಲ್ಲ. ಮಾನಸಿಕವಾಗಿ , ಸಾಮಾಜಿಕವಾಗಿ ಅವರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಮಾಡಿದರೆ ಎಲ್ಲರ ಹಾಗೆ ಸದೃಢವಾದ ಜೀವನ ಸಾಗಿಸಲು ಸಾಧ್ಯವಿದೆ. ಕಳೆದ ೨೫ ವರ್ಷಗಳಿಂದ ಎಷ್ಟೋ ಎಚ್.ಐ.ವಿ ಸೋಂಕಿತರನ್ನು ನೋಡಿದ್ದೀನಿ. ಅಲ್ಲದೇ ನಾನು ಕಾರ್ಯ ನಿರ್ವಹಿಸಿದ ಆಸ್ಪತ್ರೆಗಳಲ್ಲಿ ಎಆರ್ಟಿ ಮತ್ತು ಐಸಿಟಿಸಿ ಕೇಂದ್ರಗಳಲ್ಲಿ ಬರುವಂತಹ ರೋಗಿಗಳು ಅತ್ಯಂತ ಸದೃಢವಾಗಿ ಸಕಾರಾತ್ಮಕವಾಗಿ ಮನೋಭಾವನೆ ಹೊಂದಿ ಇತರರಿಗೆ ಮಾದರಿಯಾಗಿದ್ದಾರೆ. ಈ ಸಮಾವೇಶಕ್ಕೆ ಬಂದ ವಧು ವರರು ತಮ್ಮ ಆರೋಗ್ಯದ ಬಗ್ಗೆ ಕುಟುಂಬದ ಬಗ್ಗೆ ಕಾಳಜಿ ಹೊಂದಿರಬೇಕು. ಆರೋಗ್ಯ ನಿರ್ವಹಣೆಯಲ್ಲಿ ಸರಿಯಾಗಿ ಕಾಳಜಿ ಹೊಂದಿ ಜೀವನ ನಡೆಸುವಂತಹ ಜೀವನ ನಿಮ್ಮದಾಗಲಿ ಎಂದು ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಮಾತನಾಡಿ, ಪ್ರತಿ ವರ್ಷ ನಮ್ಮ ಇಲಾಖೆಯ ಜಿಲ್ಲೆಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಧು ವರರ ಸಮಾವೇಶವನ್ನು ಮಾಡುತ್ತಿದ್ದೇವೆ. ಇದರಿಂದ ಎಷ್ಟೋ ಜನ ಎಚ್ಐವಿ ಸೋಂಕಿತರಿಗೆ ತುಂಬಾ ಅನುಕೂಲವಾಗುತ್ತಿದೆ. ನಮ್ಮ ಜಿಲ್ಲೆಯ ಕಾರ್ಯ ಚಟುವಟಿಕೆಯನ್ನು ಇತರೆ ಜಿಲ್ಲೆಯ ಜನ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುವುದು. ರಾಜ್ಯದ ಸೋಂಕಿತರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಪೀಟರ್ ಅಲೆಕ್ಸಾಂಡರ್, ಪೂಜಾ ಟೆಲಿವಿಜನ್ ಮಾಲೀಕ ವಿಜಯಕುಮಾರ ಚವ್ಹಾಣ, ಅನೌಪಚಾರಿಕ ಸಂಸ್ಥೆಯ ಕೆವಿಎನ್ ಪಾಧರ, ಸಮರ್ಪಣಾ ಸಂಸ್ಥೆಯ ಯೋಜನಾ ನಿರ್ದೇಶಕ ರಾಮದಾಸ, ಎಆರ್ಟಿ ಕೇಂದ್ರ ವೈದ್ಯಾಧಿಕಾರಿ ಶ್ವೇತಾ ಸನದಿ, ಡ್ಯಾಕೋ ಜಿಲ್ಲಾ ಮೇಲ್ವಿಚಾರಕ ಬಾಬುರಾವ ತಳವಾರ, ಜಿಲ್ಲಾ ಆಸ್ಪತ್ರೆಯ ಎಆರ್ಟಿ ಕೇಂದ್ರದ ಹಿರಿಯ ಆಪ್ತ ಸಮಾಲೋಚಕÀ ರವಿ ಕಿತ್ತೂರ, ಸಂಪರ್ಕ ಕಾರ್ಯಕರ್ತರ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ವಿಜಯಕುಮಾರ ಕಾಂಬಳೆ ಉಪಸ್ಥಿತರಿದ್ದರು.
ಈ ಸಮಾವೇಶದಲ್ಲಿ ೨೫೦ ಕ್ಕಿಂತಲೂ ಹೆಚ್ಚು ವಧುವರರು ಮತ್ತು ಪಾಲಕರು ಭಾಗವಹಿಸಿ ಸದುಪಯೋಗ ಪಡೆದುಕೊಂಡರು.