26ರಂದು ಬೀದರ್ ಸಾಂಸ್ಕøತಿಕ ಉತ್ಸವ ಭಿತ್ತಿಪತ್ರ ಬಿಡುಗಡೆ

ಬೀದರ್:ನ.3:ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಇಂದಿನ ಸಮಾಜಕ್ಕೆ ಅನಿವಾರ್ಯವಾಗಿದ್ದು, ಇವು ಮಾನಸಿಕ ನೆಮ್ಮದಿ ಮತ್ತು ಸಾಮಾಜಿಕ ಬಾಂಧವ್ಯವನ್ನು ಬಲಪಡಿಸುತ್ತವೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಹೇಳಿದರು.

ಸಮರ್ಥ ಸೇವಾ ಸಂಸ್ಥೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುಗಳ ಸಹಯೋಗದಲ್ಲಿ ನವೆಂಬರ್ 26ರಂದು ಬೀದರ ನಗರದ ಮನ್ನಳ್ಳಿ ರಸ್ತೆಯ ಕೆ.ಆರ್.ಇ. ಫಾರ್ಮಸಿ ಕಾಲೇಜು ಆವರಣದಲ್ಲಿ ನಡೆಯಲಿರುವ ‘ಬೀದರ್ ಸಾಂಸ್ಕೃತಿಕ ಉತ್ಸವ’ದ ಭಿತ್ತಿಪತ್ರ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

“ದಿನಾಲು ಮೊಬೈಲ್ ಬಳಕೆಯಿಂದ ಸಾಂಸ್ಕೃತಿಕ ಮೌಲ್ಯಗಳಿಂದ ದೂರವಾಗುತ್ತಿರುವ ಸಮುದಾಯಕ್ಕೆ ಇಂತಹ ಉತ್ಸವಗಳು ಹೊಸ ಆಲೋಚನೆಗೆ ಇಂಬು ನೀಡುತ್ತವೆ. ಕನ್ನಡ ಭಾಷೆಯ ಬೆಳವಣಿಗೆಗೆ ಇವು ಪೂರಕವಾಗುತ್ತವೆ,” ಎಂದು ಖಂಡ್ರೆ ಹೇಳಿದರು.

ಉತ್ಸವದ ಪ್ರಮುಖ ಆಕರ್ಷಣೆಯಾಗಿ ಪ್ರಸಿದ್ಧ ಗಾಯಕ ವಿಜಯ ಪ್ರಕಾಶ ಅವರ ಸಂಗೀತ ಸಂಭ್ರಮ ಇರಲಿದ್ದು, ಖ್ಯಾತ ಚಲನಚಿತ್ರ ನಟಿ ಅಮೂಲ್ಯ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಚಿವ ಖಂಡ್ರೆ ಅವರು ಸಾರ್ವಜನಿಕರನ್ನು ಉತ್ಸವದಲ್ಲಿ ಪಾಲ್ಗೊಂಡು ಸಂಗೀತರಸದ ಸವಿಯನ್ನು ಅನುಭವಿಸಲು ಕರೆ ನೀಡಿದರು.

ಭಿತ್ತಿಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಬೀದರ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಗಿರೀಶ ಬದೋಲೆ, ಬುಡಾ ಮಾಜಿ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಸಮರ್ಥ ಸೇವಾ ಸಂಸ್ಥೆಯ ಕಾರ್ಯದರ್ಶಿ ವೀರೇಶ ಸ್ವಾಮಿ, ಹಾಗೂ ಸಾಮಾಜಿಕ ಮುಖಂಡರು ಶಿವಶಂಕರ ಟೋಕರೇ, ವೀರಶೆಟ್ಟಿ ಚನ್ನಶೆಟ್ಟಿ, ಸಿದ್ಧಾರೂಢ ಭಾಲ್ಕೆ, ಅಶೋಕ ದಿಡಗೆ ಮೊದಲಾದವರು ಉಪಸ್ಥಿತರಿದ್ದರು.