Home ಜಿಲ್ಲೆ ಬೆಂಗಳೂರು ರಂಗೋಲಿ ಸ್ಪರ್ಧೆ ವಿಜೇತರಿಗೆ ಕೂಪನ್ ವಿತರಣೆ

ರಂಗೋಲಿ ಸ್ಪರ್ಧೆ ವಿಜೇತರಿಗೆ ಕೂಪನ್ ವಿತರಣೆ

ಕೆಂಗೇರಿ, ಜೂ. ೧೬:ಯಶವಂತಪುರ ಕ್ಷೇತ್ರದ ನಾಗದೇವನಹಳ್ಳಿ ವಾರ್ಡಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಾಸಕ ಎಸ್. ಟಿ. ಸೋಮಶೇಖರ್ ರವರ ನೇತೃತ್ವದಲ್ಲಿ ಮನೆಗೊಂದು ರಂಗೋಲಿಯನ್ನು ಎರಡು ದಿನಗಳ ಕಾಲ ನಡೆಯಿತು ಈ ರಂಗೋಲಿ ಸ್ಪರ್ಧೆಯಲ್ಲಿ ಬಣ್ಣ ಬಣ್ಣದ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಕೂಪನ್ ವಿತರಿಸಿದ ಜಿಬಿಎ ನಾಗದೇವನಹಳ್ಳಿ ವಾರ್ಡ್ ಕಾಂಗ್ರೆಸ್ ಮುಖಂಡ ದೇವರಾಜ್
ಈ ಕಾರ್ಯಕ್ರಮದಲ್ಲಿ ಜಿಬಿಎ ಕೆಂಗಲ್ ಹನುಮಂತಯ್ಯ ವಾರ್ಡ್ ಕಾಂಗ್ರೆಸ್ ಮುಖಂಡ ಚೇತನ್ ಗೌಡ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಸಂದ್ರ ನಾಗರಾಜ್, ನಾಗದೇವನಹಳ್ಳಿ ವಾರ್ಡ್ ಅಧ್ಯಕ್ಷ ಪ್ರಕಾಶ್ ಗೌಡ, ರೇವಣ್ಣ, ಮಾರುತಿ ನಗರ ಟೆಂಟ್ ಹೌಸ್ ಶ್ರೀನಿವಾಸ್, ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ರುಕ್ಮಿಣಿ ಬಾಯಿ, ಲಕ್ಷ್ಮಿ,ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಿನೋದ ನರಸಿಂಹಮೂರ್ತಿ,ನೆಲಗೊಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ನೇತ್ರಾವತಿ, ಕಾಂಗ್ರೆಸ್ ಮುಖಂಡ ಗೌರೀಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.