ಬಾಲ್ಯ ವಿವಾಹ ಹಾಗೂ ಪೋಕ್ಸೊ ಕಾಯ್ದೆಗಳ ಕುರಿತು ಜನ ಜಾಗೃತಿ ಮೂಡಿಸಿ: ಡಿಸಿ

ವಿಜಯಪುರ, ಜೂ.4: ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರ ಸಹಯೋಗದೊಂದಿಗೆ ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯ್ದೆಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಆಯೋಜಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹವನ್ನು ತಡೆಗಟ್ಟಲು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ಸಮಿತಿಗಳನ್ನು ರಚಿಸಿಕೊಂಡು, ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.
ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಒಂದು ವಾರಗಳಿಂತ ಹೆಚ್ಚು ಗೈರಾದ ಮಕ್ಕಳ ಮಾಹಿತಿಗಳನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಖುದ್ದಾಗಿ ಶಾಲೆಗಳಿಗೆ ಭೇಟಿ ನೀಡುವುದರ ಮೂಲಕ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು. ಬಾಲ್ಯ ವಿವಾಹ ಘಟನೆ ಕಂಡುಬಂದಲ್ಲಿ ಅವುಗಳನ್ನು ತಡೆÀಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಬಾಲ್ಯ ವಿವಾಹ ಕಂಡುಬಂದಲ್ಲಿ ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವವರೂ ಸೇರಿದಂತೆ ಮಗುವಿನ ಪೆÇೀಷಕರು, ಮಗುವಿನ ಜವಾಬ್ದಾರಿಯನ್ನು ಹೊತ್ತವರ, ಭಾಗವಹಿಸಿದ ಇತರರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಅವರು ನಿರ್ದೇಶನ ನೀಡಿದರು.
ಬಾಲ್ಯ ವಿವಾಹ ಘಟಿಸದಂತೆ ನೋಡಿಕೊಳ್ಳಬೇಕು ಹಾಗೂ ಬಾಲ್ಯ ವಿವಾಹ ತಡೆಗೆ ಇರುವ ಸಹಾಯವಾಣಿ ಸಂಖ್ಯೆ 1098 ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಹಾಗೂ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಅಂತಹ ಗ್ರಾಮ ಪಂಚಾಯತಿಗಳಿಗೆ ಸನ್ಮಾನಿಸುವ ಕಾರ್ಯ ನಡೆಯಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ತಿಳಿಸಿದರು.
ಬಾಣಂತಿ ಮತ್ತು ಗರ್ಭಿಣಿ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಇರುವ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೆÇೀಷಣೆಯನ್ನು ಉತ್ತಮಪಡಿಸಲು ಅನುವಾಗಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನೊಂದ ಮಹಿಳೆಯರಿಗಾಗಿ ಸ್ಥಾಪಿಸಲಾಗಿರುವ ಸಖಿ ಒನ್ ಸ್ಟಾಪ್ ಸೆಂಟರ್‍ನಲ್ಲಿ ನೊಂದ ಮಹಿಳೆಯರಿಗೆ ಆರೋಗ್ಯ, ಆರೈಕೆ, ಪೆÇಲೀಸ್ ಹಾಗೂ ಕಾನೂನು ನೆರವು, ವಸತಿ ಹಾಗೂ ಆಪ್ತ ಸಮಾಲೋಚನೆ ಇತ್ಯಾದಿ ಸೇವೆಗಳನ್ನು ಸಮರ್ಪಕವಾಗಿ ದೊರಕುವಂತೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.
ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ನೊಂದ ಮಹಿಳೆಯರಿಗಾಗಿ ಜಿಲ್ಲೆಯಲ್ಲಿ ಒಟ್ಟು 06 ಸಾಂತ್ವನ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಕೇಂದ್ರಗಳಲ್ಲಿ ನೊಂದ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಕಾನೂನು ಅರಿವು, ನೆರವು ನೀಡಲಾಗುವುದು. ಅಂತಹ ಮಹಿಳೆಯರಿಗೆ ಆತ್ಮ ಸ್ಥೈರ್ಯ ನೀಡಿ ಪುನಃ ಕುಟುಂಬದೊಂದಿಗೆ ಸೇರಿಸುವ ಕಾರ್ಯವಾಗಬೇಕು. ಸಾಂತ್ವನ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಇತ್ಯರ್ಥ ಪಡೆಸಿಕೊಳ್ಳುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಅವರು ಸಾಂತ್ವನ ಕೇಂದ್ರಗಳ ವ್ಯವಸ್ಥಾಪಕರಿಗೆ ಸೂಚಿಸಿದರು.
ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಎಲ್ಲ ರೀತಿಯ ಸಹಾಯ ಸಹಕಾರವನ್ನು ಪೊಲೀಸ್ ಇಲಾಖೆ ವತಿಯಿಂದ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಶಸ್ತ್ರಚಿಕಿತ್ಸಕÀ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ತ ಗುಣಾರೆ, ಮಹಾನಗರ ಪಾಲಿಕೆಯ ಆಯುಕ್ತÀ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕÀ ಕೆ.ಕೆ.ಚವ್ಹಾಣ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಸಿ.ಬಿ.ಕುಂಬಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಟಿ.ಎಸ್. ಕೊಲ್ಹಾರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.