ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ೨೯ನೇ ದಿನಕ್ಕೆ

ಸಂಜೆವಾಣಿ ವಾರ್ತೆ,
ವಿಜಯಪುರ,ಅ.೧೬:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಗುರುವಾರ ೨೯ ನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಸಂಘಟನೆಗಳಿAದ ದಿನೇ ದಿನೇ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಈ ಧರಣಿ ಸತ್ಯಾಗ್ರಹಕ್ಕೆ ಆಗಮಸಿದ ನಿವೃತ್ತ ಅಧಿಕಾರಿ ರಾಜೇಂದ್ರ ಪೋದ್ದಾರ ಅವರು ಮಾತನಾಡಿ, ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಲ್ಲಿ ಖಾಸಗಿ ಸಹಭಾಗಿತ್ವವವನ್ನು ಸಂಪೂರ್ಣವಾಗಿ ವಿರೋಧಿಸುತ್ತೇನೆ. ಯಾರ ಹಿತಕ್ಕಾಗಿ ಪಿಪಿಪಿ ಮಾದರಿ ಎಂದು ಜನರಿಗೆ ತಿಳಿಸಬೇಕು ಹಾಗೂ ಖಾಸಗಿಯವರಿಗೆ ಲಾಭ ಮಾಡುವ ಉದ್ದೇಶವನ್ನು ಈ ಮಾದರಿ ಹೊಂದಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಐಟಿಐ ಅಸೋಸಿಯೇಶನ್ ಅಧ್ಯಕ್ಷ ಎಸ್.ಎಮ್. ನೆರಿಬೆಂಚಿ ಮಾತನಾಡಿ, ವಿಜಯಪುರದಲ್ಲಿ ವೈದ್ಯಕೀಯ ಕಾಲೇಜ್ ಅನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಬಿಟ್ಟುಕೊಡುವುದಿಲ್ಲ. ನಮ್ಮ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಮೊದಲೇ ಸ್ಥಾಪನೆಯಾಗಬೇಕಿತ್ತು. ಬಡವರ ಮಕ್ಕಳು ವೈದ್ಯಕೀಯ ಶುಲ್ಕ ಕಡಿಮೆ ಕೊಟ್ಟು ಓದಲು ಸರ್ಕಾರಿ ವೈದ್ಯಕೀಯ ಕಾಲೇಜು ನಮ್ಮ ಜಿಲ್ಲೆಗೆ ಅವಶ್ಯಕತೆ ಇದೆ. ಇದನ್ನು ಅರಿತು ಸರ್ಕಾರ ಜವಾಬ್ದಾರಿಯಿಂದ ಅದನ್ನು ನಿರ್ಮಾಣ ಮಾಡಿಕೊಡಬೇಕೆಂದು ಕರೆ ನೀಡಿದರು.
ಹೋರಾಟ ಸಮಿತಿಯ ಸದಸ್ಯರುಗಳಾದ ಅರವಿಂದ ಕುಲಕರ್ಣಿ, ಭಿ ಭಗವಾನ್ ರೆಡ್ಡಿ, ಲಲಿತಾ ಬಿಜ್ಜರಗಿ, ವಿದ್ಯಾವತಿ ಅಂಕಲಗಿ, ಅಕ್ರಂ ಮಾಶ್ಯಾಳಕರ, ಮಲ್ಲಿಕಾರ್ಜುನ ಹೆಚ್ ಟಿ, ಸುರೇಶ ಬಿಜಾಪುರ, ಜಗದೇವ ಸೂರ್ಯವಂಶಿ, ಲಕ್ಷ್ಮಣ ಕಂಬಾಗಿ, ಗಿರೀಶ ಕಲಘಟಗಿ, ಭರತ್‌ಕುಮಾರ ಹೆಚ್ ಟಿ, ಶ್ರೀನಾಥ್ ಪೂಜಾರಿ, ಸುರೇಶ ಜೀಬಿ, ದಸ್ತಗಿರ ಉಕ್ಕಲಿ, ಸಿದ್ರಾಮ ಹಳ್ಳೂರ, ಮಲ್ಲಿಕಾರ್ಜುನ ಬಟಗಿ, ಡಾ ಎಮ್ ಎಸ್ ಗುರಿಕಾರ, ನೀಲಾಂಬಿಕಾ ಬಿರಾದಾರ, ಗೀತಾ ಪಾಟೀಲ, ಗೀತಾ ಕಟ್ಟಿ, ಶಿವಬಾಳಮ್ಮ ಕೊಂಡಗೂಳಿ, ಗೀತಾ ಹೆಚ್, ಮೀನಾಕ್ಷ ಸಿಂಗೆ, ಕಾಮಿನಿ ಮುಂತಾದವರು ಭಾಗವಹಿಸಿದ್ದರು.