
ಬಾಗಲಕೋಟೆ,ಜು5 : ಬಾಗಲಕೋಟೆ ತಾಲೂಕಾ ವ್ಯಾಪ್ತಿಯಲ್ಲಿ ಬರುವ 9 ಜನ ಗ್ರಾಮ ಆಡಳಿತಾಧಿಕಾರಿಗಳಿಗೆ ಬಾಗಲಕೋಟೆ ಶಾಸಕರು ಹಾಗೂ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಾಯ್.ಮೇಟಿ ಲ್ಯಾಪಟಾಪ್ಗಳನ್ನು ವಿತರಿಸಿದರು.
ನವನಗರದ ಶಾಸಕರ ಕಚೇರಿಯಲ್ಲಿ ಹಮ್ಮಿಕೊಂಡ ವಿತರಣಾ ಕಾರ್ಯಕ್ರಮದಲ್ಲಿ ಲ್ಯಾಪಟಾಪ್ಗಳನ್ನು ವಿತರಿಸಿ ಮಾತನಾಡಿದ ಅವರು ಲ್ಯಾಪಟಾಪ್ ಬಳಕೆಯಿಂದ ಇ-ಕಚೇರಿ ಅಪ್ಲಿಕೇಷನ್ಗಳನ್ನು ಸುಲಭವಾಗಿ ನಿರ್ವಹಿಸಲು ಸಹಕಾರಿಯಾಗಲಿದೆ. ಜೊತೆಗೆ ಕೆಲಸಗಳು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಲ್ಯಾಪಟಾಪ್ ಪಡೆದುಕೊಂಡ ಗ್ರಾಮ ಆಡಳಿತಾಧಿಕಾರಿಗಳು ಸರಿಯಾಗಿ ಬಳಕೆ ಮಾಡಿಕೊಳ್ಳಲು ತಿಳಿಸಿದರು.
ತಾಲೂಕಿನ ಸೀತಿಮನಿ ವಲಯದ ಬಿಲ್ಲಕೆರೂರ, ರಾಂಪೂರ, ಸುತಗುಂಡಾರ, ಹಿರೇಗುಳಬಾಳ ಹಾಗೂ ಬಾಗಲಕೋಟೆ ವಲಯದ ಬಾಗಲಕೋಟೆ, ಶಿರೂರ, ಬೇವಿನಮಟ್ಟಿ, ಹಳ್ಳೂರ ಹಾಗೂ ಬೆನಕಟ್ಟಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪಟಾಪ್ಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾದ ಅಧ್ಯಕ್ಷ ಎಸ್.ಎನ್.ರಾಂಪೂರ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ತಹಶೀಲ್ದಾರ ಅಮರೇಶ ಪಮ್ಮಾರ, ಗ್ರೇ-2 ತಹಶೀಲ್ದಾರ ಮಹಾಂತೇಶ ಬಿರಾದಾರ ಸೇರಿದಂತೆ ನಾಗರಾಜ ಹದ್ಲಿ, ದ್ಯಾಮಣ್ಣ ಗಾಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.