
ಸಂಜೆವಾಣಿ ವಾರ್ತೆ,
ವಿಜಯಪುರ,ಜು.೩:ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು, ೧೨ನೇ ಶತಮಾನದಲ್ಲಿ ಶರಣರು ರಚಿಸಿದ ವಚನ ಸಾಹಿತ್ಯಗಳನ್ನು ಸಂಗ್ರಹಿಸಿ, ಮನುಕುಲಕ್ಕೆ ತಲುಪಿಸಲು ಶ್ರಮಿಸಿದ ಮಹಾನ ದಾರ್ಶನಿಕರು ಡಾ. ಫ.ಗು ಹಳಕಟ್ಟಿಯವರು ಎಂದು ಬಣ್ಣಿಸಿದರು.
ವಚನಗಳು ಭಾಷಾಂತರಗೊAಡು ವಚನಗಳಲ್ಲಿನ ತತ್ವಾದರ್ಶಗಳು ಜಗತ್ತಿನಾದ್ಯಂತ ಪಸರಿಸಬೇಕು. ಅಮೂಲ್ಯ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸಿಕೊಟ್ಟು ಅಪಾರ ಕೊಡುಗೆ ನೀಡಿದ್ದಾರೆ. ಅವರ ಸಾರ್ಥಕ ಸಾಧನೆ ಯುವಕರು ಅರಿಯಬೇಕು. ವಿದ್ಯಾರ್ಥಿ ಬದುಕಿನಲ್ಲಿ ಇಂತಹ ದಾರ್ಶನಿಕರ ತತ್ವಾದರ್ಶಗಳಿಂದ ಪ್ರೇರಣೆ ಪಡೆಯಬೇಕು ಎಂದು ಅವರು ತಿಳಿಸಿದರು.
ಮೋಹನ ಕಟ್ಟಿಮನಿ ಅವರು ಉಪನ್ಯಾಸ ನೀಡಿ, ಸಮಾಜದ ಹಿತಕ್ಕಾಗಿ ನಿಸ್ವಾರ್ಥದಿಂದ ಶರಣರ ವಚನ ಸಾಹಿತ್ಯಗಳನ್ನು ಸಂಗ್ರಹಿಸಿ ಮನುಕುಲಕ್ಕೆ ತಲುಪಿಸಿದ ಕೀರ್ತಿ ಡಾ. ಫÀ.ಗು.ಹಳಕಟ್ಟಿಯವರಿಗೆ ಸಲ್ಲುತ್ತದೆ ಎಂದು ಅವರು ಹೇಳಿದರು.
ಸಂಶೋಧಕರು, ವಿಜ್ಞಾನಿಗಳು, ಸಾಮಾಜಿಕ ಕಳಕಳಿಯುಳ್ಳ ಫÀ.ಗು.ಹಳಕಟ್ಟಿಯವರು ತಮ್ಮ ವಕೀಲ ವೃತ್ತಿಯನ್ನು ತೊರೆದು, ಆರ್ಥಿಕ ಸಂಕಷ್ಟದಲ್ಲಿಯೂ ವಚನಗಳ ಮುದ್ರಣ, ಪ್ರಸರಣ ಮಾಡುವುದಕ್ಕೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ಅವರು ತಿಳಿಸಿದರು.
ವಚನಗಳ ಸಂಗ್ರಹ, ಮುದ್ರಣ, ಪ್ರಸರಣಕ್ಕೆ ಮಾತ್ರ ಸಿಮೀತವಾಗಿರದೇ ವಿಜಯಪುರದ ಏಳಿಗೆ ಕನ್ನಡ ಭಾಷೆಯ ಏಳಿಗೆಗೂ ಶ್ರಮಿಸಿ ಸಮಾಜಮುಖಿ ಬದುಕು ಸಾಗಿಸಿದವರು ಡಾ. ಫÀ.ಗು. ಹಳಕಟ್ಟಿಯವರು. ವಿಜಯಪುರ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ವಿಜಯಪುರದಲ್ಲಿ ಶುದ್ಧ ನೀರಿಗಾಗಿ ಎಂ. ವಿಶ್ವೇಶ್ವರಯ್ಯನವರನ್ನು ಆಹ್ವಾನಿಸಿ, ಭೂತನಾಳ ಕೆರೆ ನಿರ್ಮಿಸಿದರು. ಸಮಾಜಕ್ಕಾಗಿ ಮಿಡಿದ ಇವರನ್ನು ವಚನ ಪಿತಾಮಹ ಹಾಗೂ ರಾವ್ ಬಹಾದ್ದೂರ ಎಂತಲೂ ಗೌರವಿಸಲಾಗುತ್ತದೆ ಎಂದು ಅವರು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಡಾ. ಫ.ಗು.ಹಳಕಟ್ಟಿಯವರು ಶರಣರ ವಚನಗಳ ಸಂಗ್ರಹಣೆ ಮುದ್ರಣಗಳಿಂದ ಈ ಸಮಾಜಕ್ಕೆ ನೀಡಿದ್ದಾರೆ. ಅವರು ಸಂರಕ್ಷಿಸಿದ್ದ ವಚನ ಸಾಹಿತ್ಯಗಳ ಸಂದೇಶಗಳನ್ನು ಮುಂದಿನ ಪೀಳಿಗೆಗಳಿಗೆ ತಲುಪಿಸಬೇಕು ಎಂದು ಅವರು ಹೇಳಿದರು.
ಸಮಾಜ ಮುಖಂಡರಾದ ಬಿ.ಎನ್. ನೂಲವಿ ಅವರು ಮಾತನಾಡಿದರು. ಬಸವರಾಜ ನಾಟಿಕಾರ ವಚನ ಗಾಯನ ನಡೆಸಿಕೊಟ್ಟರು. ಸುಭಾಷ ಕನ್ನೂರು ಅವರು ನಿರೂಪಿಸಿ, ವಂದಿಸಿದರು.
ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಕೆ.ಕೆ.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿ ಅನಸೂಯಾ ಚಲವಾದಿ, ಭೂಮಾಪನ ಇಲಾಖೆ ಉಪ ನಿರ್ದೇಶಕÀ ಮಹಾಂತೇಶ ಮುಳಗುಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕÀ ಸಂತೋಷ ಭೋವಿ, ಅಡಿವೆಪ್ಪ ಸಾಲಗಲ್, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.