
ಕಲಬುರಗಿ,ನ.06-2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ತೊಗರಿ ಆರೋಗ್ಯ ಸಮೀಕ್ಷೆ/ ಕ್ಷೀಪ್ರ ಸಂಚಾರಿ ಸಮೀಕ್ಷೆ (ಖಚಿಠಿiಜ ಖoತಿiಟಿg Suಡಿveಥಿ) ಕಾರ್ಯವನ್ನು ನವೆಂಬರ್ 5 ರಿಂದ ಎಂಟು ವಾರದವರೆಗೆ ಸರ್ವಿಕ್ಷಣಾ ಕಾರ್ಯ ಜರುಗಿಸಲು ನಿರ್ಧರಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.
ಇಂದು ಕಲಬುರಗಿ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿ, ತೊಗರಿ, ಹತ್ತಿ, ಕಬ್ಬು ಹಾಗೂ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಕಡಲೆ, ಜೋಳ ಹಾಗೂ ಇತರೆ ವಿವಿಧ ಬೆಳೆಗಳಲ್ಲಿ ಬರಬಹುದಾದ ಕೀಟ, ರೋಗ ಹಾಗೂ ಇತರ ಪೀಡೆಗಳ ಜಂಟಿ ಸರ್ವೆಕ್ಷಣೆಗಾಗಿ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿಗಳ ಒಳಗೊಂಡ 7 ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿ ಬುಧುವಾರದಂದು 7 ತಂಡಗಳಲ್ಲಿಯ ಅಧಿಕಾರಿಗಳು ಜಿಲ್ಲೆಯ ಎಲ್ಲಾ 11 ತಾಲೂಕುಗಳ ವಿವಿಧ ಗ್ರಾಮಗಳಲ್ಲಿನ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ, ಕೀಟ ಹಾಗೂ ರೋಗ ಸಮೀಕ್ಷೆ ಮಾಡಿ ತೆಗೆದುಕೊಳ್ಳಬಹುದಾದ ನಿರ್ವಹಣಾ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಿದ್ದಾರೆ.
ಪ್ರತಿ ಗುರುವಾರದಂದು ಎಂಟು ವಾರದವರೆಗೆ ರೇಡಿಯೋ (ಂಟಟ Iಟಿಜiಚಿ ಖಚಿಜio) ಮುಖಾಂತರ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳು ರೈತರೊಂದಿಗೆ ವಿವಿಧ ಬೆಳೆಗಳಿಗೆ ಬರಬಹುದಾದ ಕೀಟ, ರೋಗ ಹಾಗೂ ಇತರ ವಿಷಯಗಳ ಕುರಿತು ಸಂವಾದ ನಡೆಸಲಿದ್ದಾರೆ.
ಸಭೆಯಲ್ಲಿ ಸಹಾಯಕ ಸಂಶೋಧನಾ ನಿರ್ದೇಶಕರಾದ ಡಾ|| ಬಿ.ಎಂ. ದೊಡ್ಡಮನಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ|| ರಾಜು ತೇಗ್ಗೆಳ್ಳಿ, ಕಲಬುರಗಿ ಮತ್ತು ಸೇಡಂ ಉಪ ಕೃಷಿ ನಿರ್ದೇಶಕರು, ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ವಿಜ್ಞಾನಿಗಳು ಭಾಗವಹಿಸಿದ್ದರು.























