ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ರೈತರ ಮನವಿ

ವಿಜಯಪುರ, ಡಿ. 4 :ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಸಂಘ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ರೈತರು ಅತೀ ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬಂದು 2 ತಿಂಗಳು ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರವನ್ನು ಆರಂಭ ಮಾಡಿಲ್ಲ. ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ರೈತ ಸಂಘದ ನಿಯೋಗ ಮನವಿ ಮಾಡಿಕೊಂಡಿದೆ.
ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ಯಾವುದೇ ಶರತ್ತುಗಳನ್ನು ನೀಡದೆ ರೈತರು ಬೆಳೆದಿರುವಂತಹ ಎಲ್ಲಾ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು. ಮತ್ತು ಇಲ್ಲಿ ಇರುವಂತಹ ಗೊಂದಲಗಳನ್ನು ನಿವಾರಿಸಿ ಧಾರವಾಡಕ್ಕೆ ಶ್ಯಾಂಪಲ್ ಕಳಿಸುವುದು. ಆಗುವುದಿಲ್ಲ. ಕೂಡಲೇ ವಿಜಯಪುರ ಜಿಲ್ಲೆಯಲ್ಲಿ ಹಾಗೂ ಎಲ್ಲ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡುವಂತೆ ರೈತ ಮುಖಂಡರು ಆಗ್ರಹಿಸಿದರು.
ಒಬ್ಬ ರೈತರ ಖಾತೆಗೆ 2000 ಕೆ. ಜಿ ಅಂತಾ ನಿಗದಿ ಮಾಡಿದರೆ, ಉಳಿದ ಮೆಕ್ಕೆಜೋಳ ಏನು ಮಾಡಬೇಕು. ಸರಕಾರ ಕೇವಲ ನೆಪ ಮಾತ್ರಕ್ಕೆ ರೈತ ಪರ ಮುಖವಾಡ ಹಾಕಿದರೆ ಏನು ಪ್ರಯೋಜನವಾಗುವುದಿಲ್ಲ. ಎಲ್ಲಾ ಬೆಳೆಗಾರರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕು. ಕೇವಲ ಗೊಂದಲ ಸೃಷ್ಟಿಸಿದರೆ ಹೇಗೆ ಎಂಬುದು ತಿಳಿಯದಾಗಿದೆ ಎಂದರು.
ಈ ವೇಳೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಮನವಿ ಸ್ವೀಕರಿಸಿ, ಈಗಾಗಲೇ ಸರ್ಕಾರಕ್ಕೆ 3 ಭಾರಿ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ವರದಿ ಕಳುಹಿಸಿ ಶೀಘ್ರವಾಗಿ ಖರೀದಿ ಕೇಂದ್ರ ಆರಂಭಸುವಂತೆ ನಾವೂ ಕೂಡಾ ತಿಳಿಸಿದ್ದೇವೆ.
ಕೆ. ಎಂ. ಎಫ್, ಡಿಸ್ಟಿಲರಿ, ಹಾಗೂ ಪೆÇೀಲ್ಟ್ರಿ ಫುಡ್ ಸೇರಿದಂತೆ ಸಾಧ್ಯವಿರುವ ಎಲ್ಲಾ ಕಡೆಗೂ ಖರೀದಿ ಕೇಂದ್ರ ಆರಂಭಿಸಲು ಪ್ರಯತ್ನ ಮಾಡಲಾಗುತ್ತಿದೆ. ಮೆಕ್ಕೆಜೋಳ ಬೆಳೆಗರಾರ ಸಮಸ್ಯೆ ಕುರಿತು ಆರಿತಿರುವ ನಾವೂ ಆದಷ್ಟು ಬೇಗ ಪ್ರಾರಂಭ ಮಾಡುವಂತೆ ಪ್ರಯತ್ನ ಮಾಡುತ್ತೇವೆ ಎಂದರು.
ಈ ವೇಳೆ ಅಪರ್ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ಇತರರು ಇದ್ದರು.