ಚಿತ್ತೂರು ಬಳಿ ಅಪಘಾತ ರಾಜ್ಯದ ಐವರ ಸಾವು

ಚಿತ್ತೂರು,ಮಾ.೪-ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ.

ಚಿತ್ತೂರು ಜಿಲ್ಲೆಯ ಪಲಮನೇರು ಬಳಿ ಇಂದು ಬೆಳಿಗ್ಗೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಚಾಲಕ ನಿದ್ದೆ ಮಂಪರಿನಲ್ಲಿದ್ದನೋ ಅಥವಾ ಕಾರಿನ ವೇಗದಿಂದಾಗಿ ನಿಯಂತ್ರಣ ತಪ್ಪಿದ್ದನೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಲಿಪಶುವಿನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಸ್ಥಳೀಯರ ಮಾಹಿತಿಯ ಆಧಾರದ ಮೇಲೆ, ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. ಅವರ ವಿವರಗಳನ್ನು ಸಹ ಸಂಗ್ರಹಿಸಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಳೀಯ ಆಸ್ಪತ್ರೆಗೆ ಕರೆದೊಯ್ಯಲಾಗುತಿದೆ.