Home ಜಿಲ್ಲೆ ಕಲಬುರಗಿ ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ,ಮೇ 5: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಚರ್ಮರೋಗ ವಿಭಾಗದ ಅಡಿಯಲ್ಲಿ ಚರ್ಮ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಉಚಿತ ಚರ್ಮರೋಗ ತಪಾಸಣಾ ಶಿಬಿರವನ್ನು ಏರ್ಪಡಿಸಲಾಯಿತು. ಆಸ್ಪತ್ರೆಯ ಹೊರ ರೋಗಿಗಳ ವಿಭಾಗ 6 ರಲ್ಲಿ ನಡೆದ ಈ ಶಿಬಿರದಲ್ಲಿ 150 ಕ್ಕಿಂತಲೂ ಹೆಚ್ಚು ರೋಗಿಗಳು ಭಾಗವಹಿಸಿ ಈ ಶಿಬಿರದ ಲಾಭ ಪಡೆದುಕೊಂಡರು. ಬಸವೇಶ್ವರ ಆಸ್ಪತ್ರೆಯ ಚರ್ಮ ರೋಗದ ತಜ್ಞ ವೈದ್ಯರು ತಂಡ ಹಾಗೂ ವಿಭಾಗದ ಮುಖ್ಯಸ್ಥ ಡಾ.ಅಂಬರೀಷ್ ಎಸ್ ಬಾಡದ ಅವರು ಶಿಬಿರದಲ್ಲಿ ಭಾಗವಹಿಸಿದ ರೋಗಿಗಳಿಗೆ ಚರ್ಮದ ಕ್ಯಾನ್ಸರ್ ಸೇರಿದಂತೆ ವಿವಿಧ ಚರ್ಮರೋಗಗಳ ತಪಾಸಣೆ ಮಾಡಿ ಚರ್ಮ ರೋಗಗಳ ಬಗ್ಗೆ ಜಾಗೃತಿ ಮೂಡಿಸಿದರು. ಚರ್ಮ ಕ್ಯಾನ್ಸರ್ ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣ ಪಡಿಸಬಹುದು ಎಂದು ರೋಗಿಗಳಿಗೆ ತಿಳಿಸಿದರು.
ಶಿಬಿರದಲ್ಲಿ ಭಾಗವಹಿಸಿದ ರೋಗಿಗಳಿಗೆ ಉಚಿತ ಡರ್ಮೋಸ್ಕೋಪಿ ಪರೀಕ್ಷೆ , ಸಂಬಂಧಿಸಿದ ರಕ್ತ ತಪಾಸಣೆ, ಜೊತೆಗೆ ಅಗತ್ಯ ಔಷಧಿಗಳು ಹಾಗೂ ಬಿಸಿಲಿನಿಂದ ಚರ್ಮ ಕಾಪಾಡಿಕೊಳ್ಳಲು ಸನ್ ಸ್ಕ್ರೀನ್ ಲೋಷನ್ ಗಳನ್ನು ಉಚಿತವಾಗಿ ವಿತರಿಸಲಾಯಿತು
ಈ ಶಿಬಿರದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಆಸ್ಪತ್ರೆಯ ಸಂಚಾಲಕ ಡಾ ಕಿರಣ ದೇಶಮುಖ್, ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕ ಡಾ ಶರಣಬಸಪ್ಪ ಹರವಾಳ,ಆಡಳಿತ ಮಂಡಳಿ ಸದಸ್ಯ ಡಾ ನಾಗೇಂದ್ರ ಮಂಠಾಳೆ, ಕಾಲೇಜಿನ ಡೀನ್ ಡಾ ಶರಣಗೌಡ ಪಾಟೀಲ, ಉಪ ಡೀನ್ ಡಾ ವಿಜಯಕುಮಾರ ಕಪ್ಪಿಕೇರಿ, ವೈದ್ಯಕೀಯ ಅಧೀಕ್ಷಕ ಡಾ. ಮಲ್ಲಿಕಾರ್ಜುನ ತೇಗನೂರ,ಆಡಳಿತಾಧಿಕಾರಿ ಡಾ. ಎಂ ಆರ್ ಪೂಜಾರಿ ಉಪಸ್ಥಿತರಿದ್ದರು. ಬಸವೇಶ್ವರ ಆಸ್ಪತ್ರೆಯಲ್ಲಿನ ಎಲ್ಲ ವಿಭಾಗಗಳು ಇಂತಹ ಉಚಿತ ಶಿಬಿರಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದು ರೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥೆಯ ಅಧ್ಯಕ್ಷರು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷ ರಾಜಾ ಭೀ ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳ್ಳಿ ,ಜಂಟಿ ಕಾರ್ಯದರ್ಶಿ ಡಾ. ಕೈಲಾಸ ಪಾಟೀಲ್ ಮನವಿ ಮಾಡಿದ್ದಾರೆ