Home ಜಿಲ್ಲೆ ಕಾಮಗಾರಿಗೆ ಗುದ್ದಲಿ ಪೂಜೆ

ಕಾಮಗಾರಿಗೆ ಗುದ್ದಲಿ ಪೂಜೆ

ಚನ್ನಮ್ಮನ ಕಿತ್ತೂರ,ಜು ೧೪: ಕ್ಷೇತ್ರದ ನೇಗಿನಹಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಯೆತ್ತಿಕೊಳ್ಳಲಾಗಿರುವ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕ ಬಾಬಾಸಾಹೇಬ ಪಾಟೀಲ ನೇರವೇರಿಸಿದರು.


ನಂತರ ಅವರು ಮಾತನಾಡಿ ಈ ಕಾಮಗಾರಿ ಪೂರ್ಣಗೊಂಡ ಬಳಿಕ ನೇಗಿನಹಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ವ್ಯವಸ್ಥೆ ಇದರ ಜೊತೆಗೆ ಮಳೆಗಾಲದಲ್ಲಿ ಎದರಾಗುವ ರಸ್ತೆ ಮತ್ತು ಸಂಪರ್ಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ. ಕಾಮಗಾರಿ ಶೀಘ್ರವಾಗಿ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿ. ಗುತ್ತಿಗೆದಾರರು ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಬೇಕು. ಅಂತಹದೇನಾದರೂ ಕಂಡುಬAದರೆ ಅವರ ಬಿಲ್ ತಡೆಹಿಡಿಯಲಾಗುವುದೆಂದು ಎಚ್ಚರಿಕೆ ನೀಡಿದರು.


ಈ ವೇಳೆ ಗ್ರಾಮಸ್ಥರು, ಗಣ್ಯರು, ಕಾಂಗ್ರೇಸ್ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರಿದ್ದರು.