Home ಜಿಲ್ಲೆ ಕಲಬುರಗಿ ಬಸ್‍ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸಾವು

ಬಸ್‍ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸಾವು

ಕಲಬುರಗಿ,ಆ.2-ಐರಾವತ ಬಸ್ ಹಾಗೂ ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಮೃತಪಟ್ಟಿರುವ ದಾರುಣ ಘಟನೆ ಕಮಲಾಪುರ ತಾಲೂಕಿನ ಡೊಂಗರಗಾಂವ ಕ್ರಾಸ್ ಸಮೀಪ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಕೆಎಸ್‍ಆರ್‍ಟಿಸಿ ಬಸ್ ಚಾಲಕ ತುಕಾರಾಮ ಹಾಗೂ ಐರಾವತ ಬಸ್ ಚಾಲಕ ಶಿವಾನಂದ ರೆಡ್ಡಿ ಎಂದು ಗುರುತಿಸಲಾಗಿದೆ.
ಬೀದರ್‍ನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಐರಾವತ ಬಸ್ ಹಾಗೂ ಕಲಬುರಗಿಯಿಂದ ಬೀದರ್ ಕಡೆಗೆ ಸಾಗುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ತೀವ್ರತೆಗೆ ಒಬ್ಬ ಚಾಲಕ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಚಾಲಕ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಕಮಲಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.