ಈಶಾನ್ಯ ಭಾರತದಲ್ಲಿ ಭಾರೀ ಮಳೆ ಐವರ ಸಾವು

ನವದೆಹಲಿ,ಮೇ ೩೧-ಭಾರತದಲ್ಲಿ ಮಾನ್ಸೂನ್ ಅಬ್ಬರ ಮುಂದುವರೆದಿದೆ. ಈಶಾನ್ಯದಿಂದ ದಕ್ಷಿಣದವರೆಗೆ ಮಳೆ ಮತ್ತು ಭೂಕುಸಿತಗಳು ಸಾವಿರಾರು ಜನರನ್ನು ಬಾಧಿಸಿವೆ. ಮಿಜೋರಾಂ, ತ್ರಿಪುರ, ಮೇಘಾಲಯ ಮತ್ತು ಅಸ್ಸಾಂನಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಮಿಜೋರಾಂನ ಲಾಂಗ್ಟ್ಲೈ ಪಟ್ಟಣದಲ್ಲಿ ಭಾರೀ ಮಳೆಯಿಂದ ಅಪಾರ ಹಾನಿಯಾಗಿದೆ. ಮೂರು ಮನೆಗಳು ಕುಸಿದು ರಸ್ತೆಗಳು ಮುಚ್ಚಿಹೋಗಿವೆ.ಐಜ್ವಾಲ್‌ನಲ್ಲಿ ಗೋಡೆ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿದ್ದಾರೆ. ಐಜ್ವಾಲ್ ಮತ್ತು ಚಾಂಫೈ ಜಿಲ್ಲೆಗಳಲ್ಲಿ ಅನೇಕ ಮನೆಗಳು ಹಾನಿಗೊಳಗಾಗಿವೆ. ಭೂಕುಸಿತದಿಂದಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಐಜ್ವಾಲ್‌ನಲ್ಲಿ ಗೋಡೆ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿದ್ದಾರೆ. ಐಜ್ವಾಲ್ ಮತ್ತು ಚಾಂಫೈ ಜಿಲ್ಲೆಗಳಲ್ಲಿ ಅನೇಕ ಮನೆಗಳು ಹಾನಿಗೊಳಗಾಗಿವೆ. ಭೂಕುಸಿತದಿಂದಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಇದಲ್ಲದೆ, ತ್ರಿಪುರದಲ್ಲಿ ೧೬ ವರ್ಷದ ಬಾಲಕನೊಬ್ಬ ಪ್ರವಾಹದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಕಾರಣ, ೫೭ ಕುಟುಂಬಗಳನ್ನು ಪರಿಹಾರ ಶಿಬಿರಗಳಿಗೆ ಕಳುಹಿಸಲಾಗಿದೆ. ಮೇಘಾಲಯದಲ್ಲಿ ಮೂವರು ಪ್ರಾಣ ಕಳೆದುಕೊಂಡರು. ಭೂಕುಸಿತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ,ಒಬ್ಬ ಪುರುಷ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಮರ ಬಿದ್ದು ಹದಿಹರೆಯದವರು ಸಾವನ್ನಪ್ಪಿದ್ದಾರೆ .೨೫ ಹಳ್ಳಿಗಳ ೧,೦೦೦ ಕ್ಕೂ ಹೆಚ್ಚು ಜನರು ತೊಂದರೆಗೊಳಗಾಗಿದ್ದಾರೆ.
ಅಸ್ಸಾಂನಲ್ಲಿ ರೆಡ್ ಅಲರ್ಟ್ ಘೋಷಣೆ
ಅಸ್ಸಾಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುವಾಹಟಿಯಲ್ಲಿ ಉಂಟಾದ ಹಠಾತ್ ಪ್ರವಾಹವು ರಸ್ತೆಗಳನ್ನು ನದಿಗಳನ್ನಾಗಿ ಪರಿವರ್ತಿಸಿದೆ. ನೀರಿನ ಬವಣೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಜನರು ಎಚ್ಚರದಿಂದಿರಬೇಕು ಎಂದು ಆಡಳಿತ ಮಂಡಳಿ ಮನವಿ ಮಾಡಿದೆ. ಸಿಕ್ಕಿಂನ ಥೆಂಗ್ ಮತ್ತು ಚುಂಗ್ಥಾಂಗ್‌ನಲ್ಲಿ ಸಂಭವಿಸಿದ ಭೂಕುಸಿತಗಳಿಂದ ಅಪಾರ ಆಸ್ತಿ ಹಾನಿಯಾಗಿದೆ. ಮಂಗನ್ ಜಿಲ್ಲಾಡಳಿತ ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಿದೆ. ಕರ್ನಾಟಕದ ಮಂಗಳೂರಿನಲ್ಲಿ ಸಂಭವಿಸಿದ ಭೂಕುಸಿತದಿಂದ ಮನೆ ಕುಸಿದು ೩ ವರ್ಷದ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ೧೨೫ ವರ್ಷಗಳಲ್ಲಿ ಅತಿ ಹೆಚ್ಚು ಮಳೆ ಮೇ ತಿಂಗಳಲ್ಲಿ ದಾಖಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೇರಳದ ತ್ರಿಶೂರ್, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಬಲವಾದ ಗಾಳಿ ಮತ್ತು ಮಳೆಯು ಹಾನಿಯನ್ನುಂಟುಮಾಡಿದೆ. ವಿದ್ಯುತ್ ತಂತಿಗಳು ಉರುಳಿಬಿದ್ದವು, ಮರಗಳು ಬುಡಮೇಲಾದವು ಮತ್ತು ಅನೇಕ ಜನರು ಸ್ಥಳಾಂತರಗೊಂಡರು. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಆಲಿಕಲ್ಲು ಮಳೆಯಾಗಿದೆ. ಹವಾಮಾನ ಇಲಾಖೆ ಮುಂದಿನ ಎರಡು ದಿನಗಳವರೆಗೆ ಕಿತ್ತಳೆ ಮತ್ತು ಹಳದಿ ಎಚ್ಚರಿಕೆಗಳನ್ನು ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಏಳು ದಿನಗಳವರೆಗೆ ಈಶಾನ್ಯದಲ್ಲಿ ಭಾರೀ ಮಳೆ ಮುಂದುವರಿಯುತ್ತದೆ. ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಭಾರತದಲ್ಲಿ, ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಜೂನ್ ೧ ರವರೆಗೆ ಬಲವಾದ ಗಾಳಿಯೊಂದಿಗೆ ಮಳೆಯಾಗಲಿದೆ. ವಾಯುವ್ಯ ಭಾರತದ ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ದೆಹಲಿಯಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯೂ ಇದೆ.