
ನವದೆಹಲಿ, ಫೆ.೪: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ಸಂಘಟನೆಯ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ನಡೆಸಿದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಈ ಘಟನೆ ನಡೆದಿದೆ. ಹತ್ಯೆಗೀಡಾದ ಭಯೋತ್ಪಾದಕರನ್ನು ಜೆಇಎಂ ಕಮಾಂಡರ್ ಗಳಾದ ಮಾವಿ ಮತ್ತು ಜುಬೈರ್ ಎಂದು ಗುರುತಿಸಲಾಗಿದ್ದು, ಮೃತರಿಂದ ಎಕೆ ೪೭ ಮತ್ತು ಎಂ೪ ಕಾರ್ಬೈನ್ ಅನ್ನು ವಶಪಡಿಸಿಕೊಳ್ಳಲಾಗಿದೆ .
ಮಂಗಳವಾರ ಸಂಜೆ ೪ ಗಂಟೆ ಸುಮಾರಿಗೆ ರಾಮನಗರದ ಜಾಫರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನೈಸರ್ಗಿಕ ಗುಹೆಯೊಳಗೆ ಭಯೋತ್ಪಾದಕರನ್ನು ಪತ್ತೆಹಚ್ಚಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಶೀಘ್ರದಲ್ಲೇ ಉಭಯ ಕಡೆಯ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ವರದಿಯಾಗಿದೆ.






















