
ಕಲಬುರಗಿ,ಮಾ.1-ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರೀನ್ ಪಾರ್ಕ್ ಬಿ-1 ಬ್ಲಾಕ್ನಲ್ಲಿ ನಡೆದಿದೆ.
ವಿಜಯಕುಮಾರ ತಂದೆ ಹಣಮಂತರಾಯ ಪಾಟೀಲ ಆತ್ಮಹತ್ಯೆ ಮಾಡಿಕೊಂಡವರು.
ಖಾಸಗಿ ಶಿಕ್ಷಣ ಸಂಸ್ಥೆಯೊAದರಲ್ಲಿ ಎಸ್ಡಿಎ ಕೆಲಸ ಮಾಡುತ್ತಿದ್ದ ವಿಜಯಕುಮಾರ ಅವರು ಸಾಲ ಮಾಡಿಕೊಂಡಿದ್ದರು. ಇದರಿಂದ ಮನಸ್ಸಿನ ಮೇಲೆ ಪರಿಣಾಮ ಮಾಡಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬAಧ ಶರಣಬಸಪ್ಪ ಮಂಠಾಳೆ ಎಂಬುವವರು ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.



























