Home ಜಿಲ್ಲೆ ಜೂನ್ ೨೮ ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಜೂನ್ ೨೮ ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಧಾರವಾಡ, ಜೂ.೨೩: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜೂನ್ ೨೮, ೨೦೨೬ ರಂದು ಹಮ್ಮಿಕೊಳ್ಳಲಾಗಿದ್ದು, ೦ ರಿಂದ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ನಂತರ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದAತೆ ಕ್ರಮವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಷ್ಟಿçÃಯ ಪಲ್ಸ ಪೋಲಿಯೋ ೨೦೨೬ ಕಾರ್ಯಕ್ರಮದ ಜಿಲ್ಲಾ ಮಟ್ಟದ ಟಾಸ್ಕ್ಪೋಸ್ ಸಮಿತಿ ಸಭೆ ಜರುಗಿಸಿ, ಮಾತನಾಡಿದರು.


ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಪೋಲಿಯೋ ಲಸಿಕೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಜೂನ್ ೨೯, ೨೦೨೬ ರಿಂದ ಜೂನ್ ೩೦, ೨೦೨೬ ರವರೆಗೆ ಹಾಗೂ ನಗರ ಪ್ರದೇಶದಲ್ಲಿ ಜೂನ್ ೨೯, ೨೦೨೬ ರಿಂದ ಜುಲೈ ೧, ೨೦೨೬ ವರೆಗೆ ಮನೆ ಮನೆ ಭೇಟಿ ಮೂಲಕ ಆರೋಗ್ಯ ಕಾರ್ಯಕರ್ತರು ೦-೫ ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.


ಜಿಲ್ಲೆಯಲ್ಲಿ ೫ ವರ್ಷದೊಳಗಿನ ೨,೦೮,೭೭೯ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ೮೮೯ ಲಸಿಕಾ ಕೇಂದ್ರಗಳಿವೆ. ೯೬ ಟ್ರಾಂಜಿಸ್ಟ್ ತಂಡಗಳು ಹಾಗೂ ೫೭ ಮೊಬೈಲ್ ತಂಡಗಳನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕಾಗಿ ೩,೮೬೨ ವ್ಯಾಕ್ಸಿನೇರ‍್ಸ್ಗಳು ಮತ್ತು ೨೧೮ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಕರಪತ್ರ ಹಾಗೂ ಬ್ಯಾನರ್‌ಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಗ್ರಾಮಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಿದರು.


ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲೆಗೆ ಒಟ್ಟು ೧೮೯ ವಾಹನಗಳ ಅಗತ್ಯವಿದ್ದು, ವಿವಿಧ ತಾಲೂಕುಗಳಿಗೆ ಅವಶ್ಯಕತೆ ಅನುಸಾರ ವಾಹನಗಳನ್ನು ನಿಯೋಜಿಸಲಾಗುವುದು. ಬಸ್ ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆಯ ಖಿಡಿಚಿಟಿsiಣ ತಂಡಗಳ ಮುಖಾಂತರ ಮಕ್ಕಳಿಗೆ ಲಸಿಕೆ ಹಾಕಲು ಕ್ರಮವಹಿಸಬೇಕು. ಹಾಗೂ ಬಿಆರ್‌ಟಿಎಸ್ ನಿಲ್ದಾಣಗಳಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಪೋಲಿಯೋ ಬೂತ್‌ಗಳನ್ನು ತೆರೆಯುವುದು ಮತ್ತು ನಿಲ್ದಾಣಗಳಲ್ಲಿನ ವಿದ್ಯುತ್ ಮಾಹಿತಿ ಫಲಕದಲ್ಲಿ ಎಲ್ಲ ೦-೫ ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಕಟಣೆ ಹೊರಡಿಸುವಂತೆ ಕ್ರಮವಹಿಸಲು ತಿಳಿಸಿದರು.


ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್‌ಗಳನ್ನು ತಯಾರಿಸಲು ನಿರಂತರ ವಿದ್ಯುಚ್ಛಕ್ತಿಯ ಅವಶ್ಯಕತೆ ಇರುವುದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ದಿನಾಂಕದ ಹಿಂದಿನ ಒಂದು ವಾರದಿಂದ ಮುಂದಿನ ಮೂರು ದಿನಗಳವರೆಗೆ ವಿದ್ಯುಚ್ಛಕ್ತಿ ನಿರಂತರವಾಗಿ ಸರಬರಾಜು ಮಾಡುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಅದರಂತೆ ಆರೋಗ್ಯ ಇಲಾಖೆ, ವಿವಿಧ ಇಲಾಖೆಗಳ ಸಿಬ್ಬಂದಿಗಳು ಅಭಿಯಾನದ ಯಶಸ್ಸಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.


ಸಭೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಬಿತ್ತಿಪತ್ರವನ್ನು ಎಲ್ಲ ಅಧಿಕಾರಿಗಳು ಸೇರಿ ಬಿಡುಗಡೆ ಮಾಡಿದರು.


ಸಭೆಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್.ಕೆ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಬಿ.ಆರ್. ಪಾತ್ರೋಟ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ. ಶಶಿಧರ ಕಳಸೂರಮಠ, ಧಾರವಾಡ ತಾಲೂಕಾ ವೈದ್ಯಾಧಿಕಾರಿ ಡಾ.ಕೆ.ಎನ್.ತನುಜಾ, ಡಿ.ಎಮ್.ಓ ಡಾ.ಮಂಜುನಾಥ ಸೊಪ್ಪಿನಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.