
ಬೆಂಗಳೂರು,ಮೇ.೨೨-ಕಾಮಿಡಿ ಕಿಲಾಡಿ ಸ್ಟಾರ್ ಹಾಗೂ ನಟ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಸಹ ಕಲಾವಿದೆ ನೀಡಿರುವ ದೂರು ಆಧರಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.
ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದು ಚಿತ್ರವು ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್ಐಆರ್ ದಾಖಲಾಗಿದೆ.
ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ಮಡೆನೂರು ಮನು
ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.