
ಹುಳಿಯಾರು, ಜು. ೨೩- ತಾಲ್ಲೂಕಿನ ಹಂದನಕೆರೆ ಹೋಬಳಿಯ ಬಂದ್ರೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ೧ ಲಕ್ಷ ೫೦ ಸಾವಿರ ರೂ. ಅನುದಾನ ಮಂಜೂರುಗೊಂಡಿದೆ. ಇದರ ಮಂಜೂರಾತಿ ಪತ್ರವನ್ನು ತಾಲ್ಲೂಕು ಯೋಜನಾಧಿಕಾರಿ ಪ್ರೇಮಾನಂದ ಯಲ್. ಬಿ. ಸಹಕಾರ ಸಂಘದ ಅಧ್ಯಕ್ಷ ಬಸವರಾಜು ರವರಿಗೆ ನೀಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಿವಕುಮಾರ್, ಒಕ್ಕೂಟದ ಅಧ್ಯಕ್ಷ ದೇವರಾಜ, ಕಾರ್ಯ ನಿರ್ವಹಣಾಧಿಕಾರಿ ಶಿವಕುಮಾರ್, ಮೇಲ್ವಿಚಾರಕ ವಸಂತ, ಸೇವಾಪ್ರತಿನಿಧಿ ಕಾಂತಮಣಿ, ಸಂಘದ ನಿರ್ದೇಶಕರು, ಸ್ವ ಸಹಾಯಗಳ ಸದಸ್ಯರುಗಳು ಉಪಸ್ಥಿತರಿದ್ದರು.