ಶಾಲಾ ಪ್ರಾರಂಭೋತ್ಸವ

ನವಲಗುಂದ, ಜೂನ್ 1 : ಮಕ್ಕಳಿಗೆ ಶಿಕ್ಷಣವೇ ದೊಡ್ಡ ಆಸ್ತಿ, ಶಿಕ್ಷಣ ಇದ್ದಲ್ಲಿ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬಹುದು. ಕಾರಣ ಮಕ್ಕಳನ್ನು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ. ಇದು ಪಾಲಕರ ಜವಾಬ್ದಾರಿ ಕೂಡ ಆಗಿದೆ ಎಂದು ಪ್ರಭಾರಿ ಮುಖ್ಯಶಿಕ್ಷಕ ಎನ್ ಎಸ್ ತಾಳಿಕೋಟಿಮಠ ಹೇಳಿದರು.

ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಹಾಗೂ ಹೆಣ್ಣುಮಕ್ಕಳ ಶಾಲೆ ನಂ.1ರಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಮಕ್ಕಳಿಗೆ ಗುಲಾಬಿ ಹೂ ಮತ್ತು ಸಿಹಿ ನೀಡಿ ಸ್ವಾಗತಿಸಿ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ನುರಿತ ಅನುಭವಿ ಗುರುಬಳಗವಿದೆ ಹಾಗೂ ಸರಕಾರದಿಂದ ಹಲವಾರು ಯೋಜನೆಗಳ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಪಾಲಕರು ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಎಂದರು.

ನಂತರ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ, ಎಂಬ ಕೂಗುಗಳಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪಾಲಕರಲ್ಲಿ ಜಾಗೃತಿ ಮೂಡಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ನಿಂಗಪ್ಪ ಮನಕವಾಡ, ಈರಣ್ಣ ಬೆಂಡಿಗೇರಿ, ಪ್ರಧಾನಗುರುಗಳಾದ ಎಸ್ ಟಿ ಮೊರಬದ ಶಿಕ್ಷಕರಾದ ಯು ಪಿ ದಂಡಿಗದಾಸರ, ಶ್ರೀನಿವಾಸ ನರೇಂದ್ರಕರ, ಡಿ ಎಚ್ ಮಳಲಿ, ಸೇರಿದಂತೆ ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.