ವಿಶೇಷ ಕಾರ್ಯಾಚರಣೆ: ಜೂಜಾಟ ಪ್ರಕರಣಗಳ ಪತ್ತೆ

ಧಾರವಾಡ,ಅ27: ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್ 20, 2025 ರಿಂದ ಅಕ್ಟೋಬರ್ 23, 2025 ರ ವರೆಗೆ ಧಾರವಾಡ ಜಿಲ್ಲೆಯ ವಿವಿಧ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಮೂರು ದಿನದ ಅವಧಿಯಲ್ಲಿ ಒಟ್ಟು 54 ಇಸ್ಪೀಟ ಜೂಜಾಟ ಪ್ರಕರಣಗಳ ಪತ್ತೆ ಮಾಡಲಾಗಿದೆ. ಮತ್ತು 492 ಜನ ಆರೋಪಿತರನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪೆÇಲೀಸ್ ದಾಳಿ ಸಂದರ್ಭದಲ್ಲಿ ಆರೋಪಿತರಿಂದ ರೂ 4,41,535 ಗಳ ನಗದು ಜಪ್ತಿ ಮಾಡಿ, ಪೆÇಲೀಸ ವಶಕ್ಕೆ ಪಡೆಯಲಾಗಿದೆ.

ಧಾರವಾಡ ಗ್ರಾಮೀಣ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ 11 ಪ್ರಕರಣಗಳು, ಗರಗ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ 10 ಪ್ರಕರಣಗಳು, ನವಲಗುಂದ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ 8 ಪ್ರಕರಣಗಳು, ಹುಬ್ಬಳ್ಳಿ ಗ್ರಾಮೀಣ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ 6 ಪ್ರಕರಣಗಳು, ಕುಂದಗೋಳ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ 5 ಪ್ರಕರಣಗಳು, ಅಣ್ಣಿಗೇರಿ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ 5 ಪ್ರಕರಣಗಳು, ಗುಡಗೇರಿ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ 5 ಪ್ರಕರಣಗಳು, ಕಲಘಟಗಿ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ 3 ಪ್ರಕರಣಗಳು, ಅಳ್ಳಾವರ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ 1 ಪ್ರಕರಣ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಒಟ್ಟು 54 ಇಸ್ಪೀಟ ಜೂಜಾಟ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಪ್ರಕರಣಗಳಲ್ಲಿ ಭಾಗಿಯಾಗಿದ್ದ 492 ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಪೆÇಲೀಸ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರ ಮಾರ್ಗದರ್ಶನದಲ್ಲಿ. ಪ್ರಭಾರಿ ಹೆಚ್ಚುವರಿ ಪೆÇಲೀಸ ಅಧೀಕ್ಷಕ ಮತ್ತು ಸಿಇಎನ್ ಪೆÇಲೀಸ ಠಾಣೆಯ ಪೆÇಲೀಸ ಉಪಾಧೀಕ್ಷಕ ಶಿವಾನಂದ ಕಟಗಿ ಮತ್ತು ಧಾರವಾಡ ಗ್ರಾಮೀಣ ಉಪ ವಿಭಾಗ ಪೆÇಲೀಸ ಉಪಾಧೀಕ್ಷಕರಾದ ವಿನೋದ ಮುತ್ತೇದಾರ ಅವರ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಠಾಣೆಗಳ ಪೆÇಲೀಸ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.