ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಪಡಿಸಿಕೊಳ್ಳಬೇಕು


ಗದಗ,ಮೇ.೨೪: ಅಭ್ಯರ್ಥಿಗಳು ವೇಗವಾಗಿ ಸಾಗುವ ಕಾಲಕ್ಕೆ ತಕ್ಕಂತೆ ತಮ್ಮ ಕೌಶಲ್ಯ ವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ದೀ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.


ಗದಗ ನಗರದ ಕೆ ಎಚ್ ಪಾಟೀಲ ಸರ್ಕಾರಿ ಐಟಿಐ ಕಾಲೇಜಿನಲ್ಲಿ ತರಬೇತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋದಾಗ ಊಟ ಸರಿಯಿಲ್ಲವೆಂದೋ ತಂದೆ ತಾಯಿಯವರನ್ನು ಬಿಟ್ಟು ಇರಬೇಕೆಂದ ನೆಪ ಒಡ್ಡಿ ಸಿಕ್ಕಂತಹ ಅವಕಾಶವನ್ನು ತೊರೆದಂತಹ ಹಲವು ಪ್ರಸಂಗಗಳಿವೆ ಹಾಗಾಗಿ ವಿದ್ಯಾರ್ಥಿಗಳು ಕೆಲಸ ಸಿಕ್ಕ ಮೊದಲ ದಿನಗಳಲ್ಲಿ ಎದುರಾಗುವ ಕಷ್ಟಗಳನ್ನು ಸಹಿಸಿಕೊಳ್ಳಬೇಕು ಅಂದಾಗ ಅಭ್ಯರ್ಥಿಗಳಿಗೆ ಕಂಪನಿಗಳಿAದ ಉತ್ತಮ ಅವಕಾಶಗಳು ಒದಗಿ ಬರುತ್ತವೆ ಎಂದರು.
ಕAಪನಿಗಳಲ್ಲಿ ಉದ್ಯೋಗಕ್ಕಾಗಿ ಸೇರಿದಾಗ ಉತ್ಪಾದನೆ ಮತ್ತು ಕಂಪನಿಯಲ್ಲಿ ಕಾರ್ಯನಿರ್ವಹಿಸಬೇಕಾದ ಕೌಶಲ್ಯಗಳ ಅಭಿವೃದ್ಧಿ ಜೊತೆಗೆ ಒಟ್ಟಾರೆ ಕಂಪನಿ ಯಾವ ರೀತಿ ನಿರ್ವಹಣೆಗೊಳ್ಳುತ್ತದೆ ಎಂದುದರ ಬಗ್ಗೆ ವಿಶೇಷ ಆಸಕ್ತಿವಹಿಸಬೇಕು. ಕಲಿತ ಕೌಶಲ್ಯ ವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿ ಪಡಿಸಿಕೊಳ್ಳಬೇಕು ಮತ್ತು ಉತ್ತಮ ಸಂಭಾಷಣೆ ಕೌಶಲ್ಯ ವನ್ನು ಹೊಂದಬೇಕು ಜೀವನದಲ್ಲಿ ಒಳ್ಳೆಯದಾಗಲಿ ಎಂದು ನುಡಿದರು.
ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಸರ್ಕಾರಿ ಐಟಿಐ ಕಾಲೇಜಿನಲ್ಲಿ ಕಲಿತ ೨೦೦೦ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ದೊಡ್ಡ ಖಾಸಗಿ ಸಂಸ್ಥೆಯಲ್ಲಿ ೨೦ ಸಾವಿರ ಸಂಬಳವನ್ನು ಕೊಡುತ್ತಾರೆ ಅದನ್ನು ವಿದ್ಯಾರ್ಥಿಗಳು ಉಪಯೋಗ ಪಡೆದು ಯುವ ವಯಸ್ಸಿನಲ್ಲಿ ಯುವಕರು ಕಷ್ಟಪಟ್ಟು ಶ್ರದ್ಧೆ ಯಿಂದ ಕಲಿಯಬೇಕು ತಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ಗದಗ ತಾಲೂಕ ಗ್ಯಾರಂಟಿ ಸಮಿತಿ ಸದಸ್ಯ ಕೃಷ್ಣಗೌಡ ಪಾಟೀಲ ಮಾತನಾಡಿ ಅಪ್ರೆಂಟಿಸ್ ಪ್ರಕ್ರೀಯೆಯಲ್ಲಿ ೨೯೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ೧೭೦ ಜನ ಆಯ್ಕೆ ಆಗಿರುವುದು ಸಂತೋಷ ತಂದಿದೆ, ಯುವಕರು ತಮಗೆ ಆಸಕ್ತಿಯಿರುವ ಯಾವುದೇ ಕೌಶಲ್ಯ ಅಭಿವೃದ್ಧಿಯ ಪ್ರಕ್ರೀಯೆಯನ್ನು ನಿರಂತರವಾಗಿ ಮಾಡುತ್ತಿರಬೇಕು. ಕೆಲಸದ ಪ್ರಾರಂಭದಲ್ಲಿ ಕಡಿಮೆ ಸಂಬಳ ಸಿಗುವ ಕಾರಣ ವೊಡ್ಡಿ ಕಲಿಕೆಯನ್ನು ಬಿಡಬಾರದು ಇಂದಿನ ದಿನಮಾನದಲ್ಲಿ ತಂತ್ರಜ್ಞಾನ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ನವ ಯುಗಕ್ಕೆ ತಕ್ಕಂತೆ ನಮ್ಮ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.


ಯುವಕರಿಗೆ ಉದ್ಯೋಗ ದೊರಕಿಸುವ ಸಲುವಾಗಿ ನಗರದಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗಿತ್ತು


ಹಾಗೂ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೂಡಲೇ ನೇಮಕಾತಿ ಆದೇಶವನ್ನು ನೀಡಲಾಗಿದೆ ಈ ಮೂಲಕ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಪಡೆಯಲು ಸಹಕಾರಿಯಾಗಿದೆ ಎಂದರು.
ಐಟಿಐ ಓದುತ್ತಿರುವ ವಿದ್ಯಾರ್ಥಿಗಳಿಗೆ ಕಷ್ಟ ಪರಿಸ್ಥಿತಿ ಎದುರಾದರೆ ಕಾಲೇಜಿನ ಉಪನ್ಯಾಸಕರೊಡನೆ ಸಮಸ್ಯೆಯನ್ನು ಚರ್ಚಿಸಿ ಪರಿಹಾರ ಕಂಡು ಹಿಡಿದು ಕೊಳ್ಳಬೇಕು ಎಂದು ತಿಳಿಸಿದರು.
ಕೆ ಎಚ್ ಪಾಟೀಲ ಸರ್ಕಾರಿ ಐಟಿಐ ಕಾಲೇಜ ಪ್ರಾಚಾರ್ಯ ಬಸವರಾಜ ಮಲ್ಲೂರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.


ಕೌಶಲ್ಯಾಭಿವೃದ್ದಿ ಇಲಾಖೆ ಜಂಟಿ ನಿರ್ದೇಶಕ ಬಸವಪ್ರಭು ಹಿರೇಮಠ ಸೇರಿದಂಯೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಲೇಜಿನ ಸಿಬ್ಬಂದಿ ಹಾಗು ವಿದ್ಯಾರ್ಥಿಗಳು ಹಾಜರಿದ್ದರು.